ಬ್ರೇಕಿಂಗ್ ನ್ಯೂಸ್
25-01-21 11:14 am Mangalore Correspondent - Special Report ಕ್ರೈಂ
ಬೆಳ್ತಂಗಡಿ, ಜ.25 : ಉಜಿರೆಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡನ ಎಂಪೈರ್ ಹೊಟೇಲಿಗೆ ನುಗ್ಗಿ ಅಲ್ಲಿನ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ ಹಾಗೂ ನವೀನ್ ಬಂಧಿತ ಆರೋಪಿಗಳು.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಉಜಿರೆಯ ಎಂಪೈರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಅಲ್ತಾಫ್ ಎಂಬವರು ಪಾರ್ಸೆಲ್ ನೀಡಿ ವಾಪಸ್ ಬರುತ್ತಿರುವುದನ್ನು ಕಾದು ಕುಳಿತಿದ್ದ ತಂಡವೊಂದು ಹಲ್ಲೆ ನಡೆಸಿದೆ. ಅವರು ಹಲ್ಲೆಕೋರರಿಂದ ತಪ್ಪಿಸಿಕೊಂಡು ಹೊಟೇಲ್ಗೆ ಬಂದಿದ್ದಾರೆ. ಈ ವೇಳೆ ತಂಡ ಅಲ್ತಾಫ್ರನ್ನು ಬೆನ್ನಟ್ಟಿಕೊಂಡು ಬಂದು ಹೊಟೇಲ್ಗೆ ನುಗ್ಗಿ ಅಲ್ತಾಫ್ ಹಾಗೂ ಸ್ಥಳದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.


ವಾರದ ಹಿಂದೆ ಹೊಟೇಲ್ಗೆ ಬಂದಿದ್ದ ಈ ತಂಡ ಹೋಟೆಲ್ ಕೆಲಸಗಾರರೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದ್ದು ಇದರ ಮುಂದುವರಿದ ಭಾಗವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸುಮಾರು ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ಸಿಸಿಟಿವಿ ಕ್ಯಾಮರಾಗಳ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Beltangady police on Sunday, January 24 arrested six persons for allegedly barging into a hotel owned by a local BJP leader and assaulting the staff.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm