ಬ್ರೇಕಿಂಗ್ ನ್ಯೂಸ್
26-01-21 01:29 pm Bangalore Correspondent ಕ್ರೈಂ
ಬೆಂಗಳೂರು, ಜ.26: ಕೆಪಿಎಸ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಕರಣದಲ್ಲಿ ರೂವಾರಿಯಾಗಿದ್ದ ಸ್ಟೆನೋಗ್ರಾಫರ್ ಸನಾ ಬೇಡಿ ಎಂಬ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ, ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 16ಕ್ಕೇರಿದೆ.
ಕೆಲ ವರ್ಷಗಳಿಂದ ಕೆಪಿಎಸ್ಸಿ ಪರೀಕ್ಷಾ ವಿಭಾಗದಲ್ಲಿ ಸ್ಟೆನೋಗ್ರಾಫರ್ ಆಗಿದ್ದ ಸನಾ ಬೇಡಿ, ಜ.24ರಂದು ಭಾನುವಾರ ನಡೆಯಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು ಟೈಪ್ ಮಾಡಿದ್ದಳು. ಅಲ್ಲದೆ, ಅದನ್ನು ಪ್ರಮುಖ ಆರೋಪಿ ರಮೇಶ್ ಅಲಿಯಾಸ್ ರಾಮಪ್ಪ ಹರೇಕಲ್ ಗೆ ಪೆನ್ ಡ್ರೈವ್ ಮೂಲಕ ಕೊಟ್ಟಿದ್ದಳು. ರಮೇಶ್ ಹಣದ ಆಮಿಷಕ್ಕೊಳಗಾಗಿ ತನ್ನ ಪರಿಚಿತ ಚಂದ್ರು ಮೂಲಕ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಿದ್ದ ಎನ್ನುವ ಅಂಶ ವಿಚಾರಣೆಯಲ್ಲಿ ಬಯಲಾಗಿದೆ.
ಕೆಪಿಎಸ್ಸಿ ವಿಭಾಗದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರಮೇಶ್, ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಸನಾ ಬೇಡಿ ಟೈಪ್ ಮಾಡುವ ಬಗ್ಗೆ ತಿಳಿದಿತ್ತು. ಅದಕ್ಕಾಗಿ ಸನಾ ಬೇಡಿಯನ್ನು ಕಾಡತೊಡಗಿದ್ದ ರಮೇಶ್, ಈ ಬಾರಿ ಎಫ್ ಡಿಎ ಪರೀಕ್ಷೆ ಬರೆದು ಪಾಸಾಗಬೇಕು ಎಂದು ನಾಟಕವಾಡಿದ್ದ. ಅಲ್ಲದೆ, ಪ್ರಶ್ನೆ ಪತ್ರಿಕೆಯ ಪ್ರತಿ ನೀಡುವಂತೆ ಪೀಡಿಸಿದ್ದಾನೆ. ಬಳಿಕ ಸನಾ ಬೇಡಿ ತನ್ನಲ್ಲಿ ಕಾಪಿ ಮಾಡಿ ಇಟ್ಟುಕೊಂಡಿದ್ದ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ಪೆನ್ ಡ್ರೈವ್ ನಲ್ಲಿ ಹಾಕಿ ಕೊಟ್ಟಿದ್ದಳು. ಅದಕ್ಕಾಗಿ ಎಷ್ಟು ಹಣ ಪಡೆದಿದ್ದಾಳೆ ಎನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರಮೇಶ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಎಲ್ಲವನ್ನೂ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದಾನೆ.
ಇದೇ ವೇಳೆ, ಪ್ರಶ್ನೆಪತ್ರಿಕೆಯನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಅಭ್ಯರ್ಥಿಗಳಿಂದ ಡೀಲ್ ಕುದುರಿಸಿದ್ದ ಚಂದ್ರ ಮತ್ತು ರಾಜಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಈವರೆಗೆ 82 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹಣ ಕೊಟ್ಟು ಪ್ರಶ್ನೆ ಪತ್ರಿಕೆ ಖರೀದಿಸಿದ್ದ 10ಕ್ಕೂ ಹೆಚ್ಚು ಅಭ್ಯರ್ಥಿಗಳನ್ನೂ ಬಂಧಿಸಿದ್ದಾರೆ.
Continuing its investigations into the FDA question paper leak case, the Central Crime Branch (CCB) today arrested Sana Bedi, stenographer in the Karnataka Public Service Commission (KPSC) controller of exam division, who allegedly played a key role in getting the papers leaked.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am