ಬ್ರೇಕಿಂಗ್ ನ್ಯೂಸ್
26-01-21 02:45 pm Mangalore Correspondent ಕ್ರೈಂ
ಮಂಗಳೂರು, ಜ.26: ಕಾವೂರು ಠಾಣೆ ವ್ಯಾಪ್ತಿಯ ಶಾಂತಿನಗರದಲ್ಲಿ ನಿನ್ನೆ ರಾತ್ರಿ ಪುಂಡಾಟಿಕೆ ನಡೆದಿದೆ. ಯುವಕನೊಬ್ಬ ಇಬ್ಬರ ಮೇಲೆ ವಿನಾಕಾರಣ ಸೋಂಟೆಯಲ್ಲಿ ಹಲ್ಲೆ ನಡೆಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ರಾತ್ರೋರಾತ್ರಿ ಶಾಂತಿನಗರದಲ್ಲಿ ಭಾರೀ ಸಂಖ್ಯೆಯಲ್ಲಿ ಯುವಕರು ಸೇರಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ರಾತ್ರಿ 11 ಗಂಟೆ ಸುಮಾರಿಗೆ ನಿಕಿತ್ ಮತ್ತು ಇನ್ನೊಬ್ಬ ಕಾರಿನಲ್ಲಿ ಬರುತ್ತಿದ್ದಾಗ ಶಾಂತಿನಗರದಲ್ಲಿ ಅಶ್ರಫ್ ಎಂಬ ಯುವಕ ರಸ್ತೆಯಲ್ಲಿ ಕುಳಿತು ಸಿಗರೇಟು ಸೇದುತ್ತಿದ್ದ. ಈ ಬಗ್ಗೆ ರಸ್ತೆಯಲ್ಲಿ ಕುಳಿತಿರುವ ವ್ಯಕ್ತಿಯನ್ನು ಕಾರಿನಲ್ಲಿದ್ದ ಮಂದಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ಮಾತಿನ ಚಕಮಕಿ ನಡೆದಿದ್ದು, ಅಶ್ರಫ್ ಅಲ್ಲಿ ಕೈಗೆ ಸಿಕ್ಕ ಮರದ ಸೋಂಟೆಯಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ.
ಇಷ್ಟಾಗುತ್ತಿದ್ದಂತೆ, ಕಾವೂರಿನ ಹಿಂದು ಸಂಘಟನೆ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು, ಪೊಲೀಸರಿಗೂ ಸುದ್ದಿ ಮುಟ್ಟಿಸಿದ್ದಾರೆ. ಕಾವೂರು ಪೊಲೀಸರು ಬಂದು ಉದ್ರಿಕ್ತರನ್ನು ಮನವೊಲಿಸಿ, ಚದುರಿಸಿದ್ದಾರೆ. ಅಲ್ಲದೆ, ಅಶ್ರಫ್ ವಿರುದ್ಧ ಕೇಸು ದಾಖಲಿಸುವುದಾಗಿ ಹೇಳಿದ್ದಾರೆ. ರಾತ್ರಿ 12 ಗಂಟೆ ವೇಳೆಗೆ ಪೆಟ್ಟು ತಿಂದ ಯುವಕರಿಬ್ಬರ ಮನೆಯಿಂದ ಮಹಿಳೆಯರೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಅಲ್ಲದೆ, ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಪೊಲೀಸರ ನಿರ್ಲಕ್ಷ್ಯಕ್ಕೆ ಗಾಂಜಾ ಅಡ್ಡೆ !
ಶಾಂತಿನಗರದಲ್ಲಿ ಸಂಜೆ ಹೊತ್ತಿಗೆ ಯುವತಿಯರು, ಮಹಿಳೆಯರು ನಡೆದುಕೊಂಡು ಹೋಗಲು ಭಯ ಪಡುತ್ತಿದ್ದಾರೆ. ಯುವಕರು ಸೇರಿಕೊಂಡು ಚುಡಾಯಿಸುವುದು, ಕಿಚಾಯಿಸುವುದನ್ನು ಮಾಡುತ್ತಾ ಕೀಟಲೆ ಮಾಡುತ್ತಾರೆ. ಅಲ್ಲದೆ, ಗಾಂಜಾ ಸೇದಿಕೊಂಡು ಪೊಲೀಸರಿಗೂ ಭಯ ಪಡದ ವಾತಾವರಣ ಅಲ್ಲಿದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಭಾಗದಲ್ಲಿ ಪೊಲೀಸರು ಬೀಟ್ ಮಾಡುವುದಿಲ್ಲ. ಸಂಜೆಯಿಂದ ರಾತ್ರಿಯಾದರೂ ಅಲ್ಲಿ ಬೀದಿಯಲ್ಲಿ ನಿಂತು, ರಸ್ತೆಯಲ್ಲಿ ಕುಳಿತು ಯುವಕರು ಕೀಟಲೆ ನಡೆಸುತ್ತಾರೆ. ಮಂಗಳೂರು ನಗರ ಭಾಗದಲ್ಲಿ ಬೀಟ್ ಮಾಡುವ ಪೊಲೀಸರು ಈ ಭಾಗದಲ್ಲಿ ಯಾಕೆ ಮಾಡುವುದಿಲ್ಲ. ಪೊಲೀಸರ ನಿರ್ಲಕ್ಷ್ಯದಿಂದಲೇ ಶಾಂತಿನಗರ ಗಾಂಜಾ ಅಡ್ಡೆಯಾಗಿದೆ ಎಂದು ದೂರುತ್ತಾರೆ.

ಆರೋಪಿ ಅಶ್ರಫ್ ಮೂಲತಃ ಮೂಲ್ಕಿಯ ಕಾರ್ನಾಡು ನಿವಾಸಿ ಎನ್ನಲಾಗುತ್ತಿದೆ. ಕೆಲಸದ ನಿಮಿತ್ತ ಕಾವೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ತಲೆಮರೆಸಿಕೊಂಡಿದ್ದಾನೆ. ಈ ಬಗ್ಗೆ ಕಾವೂರು ಪೊಲೀಸರಲ್ಲಿ ಕೇಳಿದರೆ, ಅದು ಗಾಂಜಾ ಗಲಾಟೆ, ದೊಡ್ಡ ವಿಷ್ಯ ಏನಿಲ್ಲ ಎನ್ನುತ್ತಾರೆ. ಪೊಲೀಸರ ನಿರ್ಲಕ್ಷ್ಯವೇ ಅಪರಾಧಿಗಳ ಆಟಾಟೋಪಕ್ಕೆ ಕಾರಣವಾಗುತ್ತದೆ ಅನ್ನುವುದನ್ನು ಪೊಲೀಸರು ಮನಗಂಡಂತಿಲ್ಲ.
Ganja Consumption in car has lead to fight between two groups at Shantinagar in Kavoor. A case has been filed and the accused is said to be absconding.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm