ಬ್ರೇಕಿಂಗ್ ನ್ಯೂಸ್
27-01-21 12:01 pm Udupi Correspondent ಕ್ರೈಂ
ಉಡುಪಿ, ಜ.27 : ಬೈಕಿನಲ್ಲಿ ತೆರಳುತ್ತಿದ್ದ ತಾಯಿ - ಮಗನನ್ನು ಕೋಟ ಠಾಣೆ ಪೊಲೀಸರು ತಪಾಸಣೆ ನೆಪದಲ್ಲಿ ಥಳಿಸಿ ಅಮಾನವೀಯ ನಡೆ ತೋರಿದ ಘಟನೆ ಕೋಟದಲ್ಲಿ ನಡೆದಿದೆ.
ಪ್ರಶಾಂತ್ ಎಂಬವರು, ಕೋಟ ಮೂರುಕೈ ರಸ್ತೆಯಲ್ಲಿ ಸಾಯ್ಬರ ಕಟ್ಟೆಗೆಂದು ತಾಯಿ ಶಾರದಾ ಅವರನ್ನು ಬೈಕ್ ನಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದರು. ಈ ಸಂದರ್ಭ ಚೆಕ್ಕಿಂಗ್ ನೆಪದಲ್ಲಿ ಕರ್ತವ್ಯದಲ್ಲಿದ್ದ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ. ಮತ್ತು ಸ್ಟೇಶನ್ ಎಸ್ ಬಿ ರಾಜು ಅವರು ಪ್ರಶಾಂತ್ ಬೈಕ್ ತಡೆದು ದಾಖಲೆ ಕೇಳಿದ್ದಾರೆ. ಒರಿಜಿನಲ್ ದಾಖಲೆ ಮನೆಯಲ್ಲಿದ್ದ ಕಾರಣ ವಾಹನದ ದಾಖಲೆಯ ಝೆರಾಕ್ಸ್ ಅನ್ನು ಪ್ರಶಾಂತ್ ಪೊಲೀಸರಿಗೆ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಪೊಲೀಸರು ಪ್ರಶಾಂತ್ ಗೆ ಅವಾಚ್ಯ ಮಾತುಗಳಿಂದ ನಿಂದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನೆಪಕ್ಕೆ ಪ್ರಶಾಂತ್ ಮೇಲೆ ಕೋಟ ಎಸ್ಸೈ ಕೈ ಮಾಡಿದ್ದು ಇಬ್ಬರು ಪೊಲೀಸರು ಸೇರಿ ಹಲ್ಲೆಗೈದು ಥಳಿಸಿದ್ದಾರೆ. ಇದನ್ನು ತಡೆಯಲು ಬಂದ ಪ್ರಶಾಂತ್ ತಾಯಿ ಶಾರದಾ ಅವರಿಗೂ ಬೆತ್ತದಿಂದ ಪೆಟ್ಟು ನೀಡಿದ್ದು ಮಗನನ್ನು ಅರೆಸ್ಟ್ ಮಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಿಸಿದ್ದಾರೆ. ಇತ್ತ ಪೊಲೀಸ್ ರಿಂದ ಥಳಿಸಿಕೊಂಡ ಶಾರದಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ , ಇದೇ ವಿಚಾರವಾಗಿ ತಾಯಿ ಶಾರದಾ ಮಾನವ ಹಕ್ಕುಗಳ ಆಯೋಗಕ್ಕೆ ಮೊರೆ ಹೋಗಿದ್ದಾರೆ. ಥಳಿಸುವ, ಹಲ್ಲೆ ಮಾಡುವ ಅಗತ್ಯ ಇಲ್ಲದಿದ್ದರೂ ನನ್ನ ಮತ್ತು ಮಗನ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕೇಸು ದಾಖಲಿಸಬೇಕು, ಕರ್ತವ್ಯದಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರ ಕೃತ್ಯ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Son and Mother have been brutally assaulted by Kota Police overheated arguments in the matter of Vehicle Inspection in Udupi.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am