ಬ್ರೇಕಿಂಗ್ ನ್ಯೂಸ್
27-01-21 12:01 pm Udupi Correspondent ಕ್ರೈಂ
ಉಡುಪಿ, ಜ.27 : ಬೈಕಿನಲ್ಲಿ ತೆರಳುತ್ತಿದ್ದ ತಾಯಿ - ಮಗನನ್ನು ಕೋಟ ಠಾಣೆ ಪೊಲೀಸರು ತಪಾಸಣೆ ನೆಪದಲ್ಲಿ ಥಳಿಸಿ ಅಮಾನವೀಯ ನಡೆ ತೋರಿದ ಘಟನೆ ಕೋಟದಲ್ಲಿ ನಡೆದಿದೆ.
ಪ್ರಶಾಂತ್ ಎಂಬವರು, ಕೋಟ ಮೂರುಕೈ ರಸ್ತೆಯಲ್ಲಿ ಸಾಯ್ಬರ ಕಟ್ಟೆಗೆಂದು ತಾಯಿ ಶಾರದಾ ಅವರನ್ನು ಬೈಕ್ ನಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದರು. ಈ ಸಂದರ್ಭ ಚೆಕ್ಕಿಂಗ್ ನೆಪದಲ್ಲಿ ಕರ್ತವ್ಯದಲ್ಲಿದ್ದ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ. ಮತ್ತು ಸ್ಟೇಶನ್ ಎಸ್ ಬಿ ರಾಜು ಅವರು ಪ್ರಶಾಂತ್ ಬೈಕ್ ತಡೆದು ದಾಖಲೆ ಕೇಳಿದ್ದಾರೆ. ಒರಿಜಿನಲ್ ದಾಖಲೆ ಮನೆಯಲ್ಲಿದ್ದ ಕಾರಣ ವಾಹನದ ದಾಖಲೆಯ ಝೆರಾಕ್ಸ್ ಅನ್ನು ಪ್ರಶಾಂತ್ ಪೊಲೀಸರಿಗೆ ನೀಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಪೊಲೀಸರು ಪ್ರಶಾಂತ್ ಗೆ ಅವಾಚ್ಯ ಮಾತುಗಳಿಂದ ನಿಂದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನೆಪಕ್ಕೆ ಪ್ರಶಾಂತ್ ಮೇಲೆ ಕೋಟ ಎಸ್ಸೈ ಕೈ ಮಾಡಿದ್ದು ಇಬ್ಬರು ಪೊಲೀಸರು ಸೇರಿ ಹಲ್ಲೆಗೈದು ಥಳಿಸಿದ್ದಾರೆ. ಇದನ್ನು ತಡೆಯಲು ಬಂದ ಪ್ರಶಾಂತ್ ತಾಯಿ ಶಾರದಾ ಅವರಿಗೂ ಬೆತ್ತದಿಂದ ಪೆಟ್ಟು ನೀಡಿದ್ದು ಮಗನನ್ನು ಅರೆಸ್ಟ್ ಮಾಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಿಸಿದ್ದಾರೆ. ಇತ್ತ ಪೊಲೀಸ್ ರಿಂದ ಥಳಿಸಿಕೊಂಡ ಶಾರದಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ , ಇದೇ ವಿಚಾರವಾಗಿ ತಾಯಿ ಶಾರದಾ ಮಾನವ ಹಕ್ಕುಗಳ ಆಯೋಗಕ್ಕೆ ಮೊರೆ ಹೋಗಿದ್ದಾರೆ. ಥಳಿಸುವ, ಹಲ್ಲೆ ಮಾಡುವ ಅಗತ್ಯ ಇಲ್ಲದಿದ್ದರೂ ನನ್ನ ಮತ್ತು ಮಗನ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕೇಸು ದಾಖಲಿಸಬೇಕು, ಕರ್ತವ್ಯದಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರ ಕೃತ್ಯ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
Son and Mother have been brutally assaulted by Kota Police overheated arguments in the matter of Vehicle Inspection in Udupi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am