ಬ್ರೇಕಿಂಗ್ ನ್ಯೂಸ್
27-01-21 07:02 pm Mangaluru Correspondent ಕ್ರೈಂ
ಉಳ್ಳಾಲ, ಜ.27: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಯುವಕನೋರ್ವ ತಪಾಸಣೆ ನಡೆಸುತ್ತಿದ್ದ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ, ಸಂತ್ರಸ್ತ ವೈದ್ಯೆ ಮಾತ್ರ ಆರೋಪಿಯ ವಿರುದ್ಧ ಕೇಸು ದಾಖಲಿಸಲು ಹಿಂದೇಟು ಹಾಕಿದ್ದಾರೆ.
ಕೆ.ಸಿ.ರೋಡ್ ಕಾಟಂಗರಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್(27) ಎಂಬಾತ ಆರೋಪಿಯಾಗಿದ್ದು ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೈದ್ಯೆಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದ. ಬಳಿಕ ಅಲ್ಲಿನ ಸಿಬಂದಿ ಮಾಹಿತಿಯಂತೆ ಉಳ್ಳಾಲ ಪೊಲೀಸರು ತಕ್ಷಣವೇ ಬಂಧಿಸಿದ್ದರು. ಸಂತ್ರಸ್ತ ಯುವತಿ ಆಂಧ್ರ ಮೂಲದವರೆನ್ನಲಾಗಿದ್ದು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕೋರ್ಸ್ ಪೂರೈಸಿ ಇಂಟರ್ನ್ ಶಿಪ್ ನಡೆಸುತ್ತಿದ್ದರು ಎನ್ನಲಾಗಿದೆ. ಸರಕಾರದ ನಿಯಮ ಪ್ರಕಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಲು ನಿಯೋಜಿತರಾಗಿದ್ದರು.

ಮೌಖಿಕ ದೂರಿನಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದು ಈಗ ಲಿಖಿತ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರಕರಣ ದಾಖಲಿಸಲು ಸಂತ್ರಸ್ತ ಯುವತಿ ಮತ್ತು ಆಕೆಯ ತಂದೆ ಹಿಂಜರಿಯುತ್ತಿದ್ದಾರೆ. ಕೇಸು ದಾಖಲಿಸಿ ಅದರ ಹಿಂದೆ ಹೋಗುವುದು ಯಾಕೆಂದು ಹಿಂಜರಿದಿದ್ದಾರೆ. ಕಿರುಕುಳ ಪ್ರಕರಣದಲ್ಲಿ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸದಂತೆ ರಾಜಕೀಯ ಮುಖಂಡರು ಉಳ್ಳಾಲ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂದು ತಿಳಿದು ಬಂದಿದೆ.
ಉನ್ನತ ಶಿಕ್ಷಣ ಪಡೆದಿರುವ ವೈದ್ಯೆಯೇ ತನಗಾದ ಅನ್ಯಾಯದ ವಿರುದ್ಧ ಕೇಸು ದಾಖಲಿಸದೆ ರಾಜಿ ಸಂಧಾನಕ್ಕೆ ಮುಂದಾದರೆ ಕಾಮುಕರು ಆರೋಗ್ಯ ಕೇಂದ್ರಗಳಲ್ಲಿ ಅತ್ಯಾಚಾರ ಮಾಡಿದರೂ ಆಶ್ಚರ್ಯ ಇರಲ್ಲ ! ಬೆಳಗ್ಗೆ ನರ್ಸ್ ಯುವತಿಗೆ ಕಿರುಕುಳ ಎಂದು ಹೇಳಲಾಗಿತ್ತು. ಈಗ ಆಕೆ ಕೆಎಂಸಿಯ ವೈದ್ಯೆ ಎನ್ನುವ ವಿಚಾರ ತಿಳಿದುಬಂದಿದೆ.
Read: ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಬಂದಿದ್ದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ಕಾಮುಕ ಬಂಧನ
A Doctor was sexually harassed by a patient in kotekar health centre in Mangalore. But the victim Doctor steps back to file a complaint to Ullal police station in Mangalore.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm