ಬ್ರೇಕಿಂಗ್ ನ್ಯೂಸ್
30-01-21 12:40 pm Udupi Correspondent ಕ್ರೈಂ
ಕುಂದಾಪುರ, ಜ.30: ಆರು ವರ್ಷಗಳ ಹಿಂದೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಬಳಿಕ ಮದುವೆ ನಿರಾಕರಿಸಿದ ಆರೋಪಿಗೆ ಕುಂದಾಪುರದಲ್ಲಿರುವ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.
ಅರ್ಡಿ ಸಮೀಪದ ಕೊಂಜಾಡಿ ನಿವಾಸಿ ಪ್ರದೀಪ್ ನಾಯ್ಕ್ (36) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 2005ರಲ್ಲಿ ಹೊಸ ಮನೆಯ ಗಾರೆ ಕೆಲಸಕ್ಕೆಂದು ಬಂದಿದ್ದ ಪ್ರದೀಪ್, ಅಲ್ಲಿನ ಯುವತಿಯೊಂದಿಗೆ ಸ್ನೇಹ ಬೆಳಸಿದ್ದನು. ಬಳಿಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದನು. ಮುಂದೆ ಮದುವೆಗೆ ನಿರಾಕರಿಸಿ ವಂಚಿಸಿದ್ದು ಯುವತಿ ನೀಡಿದ ದೂರಿನಂತೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿ ಹಾಗೂ ಆಕೆ ತಂದೆ-ತಾಯಿ ಸೇರಿ ಒಟ್ಟು 9 ಮಂದಿ ನ್ಯಾಯಾಲಯದಲ್ಲಿ ಸಾಕ್ಷಿ ನುಡಿದಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಧೀಶ ನರಹರಿ ಪ್ರಭಾಕರ್ ಮರಾಠೆ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟರು.
ಅದರಂತೆ ಅತ್ಯಾಚಾರ ಪ್ರಕರಣ ಐಪಿಸಿ ಕಲಂ 376ಗೆ 10 ವರ್ಷ ಕಠಿಣ ಜೈಲು ಮತ್ತು 50 ಸಾವಿರ ದಂಡ, ಮನೆಗೆ ಅಕ್ರಮ ಪ್ರವೇಶ ಮಾಡಿದ್ದಕ್ಕೆ ಐಪಿಸಿ ಸೆಕ್ಷನ್ 448 ಹಾಗೂ ಮೋಸ (ಐಪಿಸಿ ಕಲಂ 417) ಕ್ಕೆ ತಲಾ 1 ವರ್ಷ ಸಜೆ ಮತ್ತು ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದಲ್ಲಿ 50 ಸಾವಿರ ರೂ. ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದಿಸಿದ್ದರು.
Kundapur district and additional sessions Justice Narahari Prabhakar Marate has announced the quantum of punishment for the accused who had raped a girl for several years by making false promises of marriage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am