ಬ್ರೇಕಿಂಗ್ ನ್ಯೂಸ್
02-02-21 05:26 pm Headline Karnataka News Network ಕ್ರೈಂ
ಬೆಂಗಳೂರು, ಫೆ.2: ಖ್ಯಾತ ಟಿವಿ ಜ್ಯೋತಿಷಿ ಆನಂದ ಗುರೂಜಿಯನ್ನು ವಿಡಿಯೋ ತುಣುಕು ಮುಂದಿಟ್ಟು ಪತ್ರಕರ್ತರ ಸೋಗಿನಲ್ಲಿ ಬ್ಲ್ಕಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಆನಂದ ಗುರೂಜಿ ಆಪ್ತ ಬಿ.ಆರ್.ನಾಗರಾಜ್ ನೀಡಿದ್ದ ದೂರಿನಂತೆ, ಕೃಷ್ಣಮೂರ್ತಿ, ವೆಂಕಟೇಶ್ ಮತ್ತು ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಎಂಬ ಮೂವರ ವಿರುದ್ಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ ಸೂರ್ಯ ಎನ್ನುವ ಪತ್ರಿಕೆಯ ಸಂಪಾದಕ ಜಿ.ಕೆ.ವೇಲು ಅಲಿಯಾಸ್ ಮಾರ್ಕೆಟ್ ವೇಲು ಮತ್ತು ಯುವ ಕರ್ನಾಟಕ ಸಂಘಟನೆಯ ಅಧ್ಯಕ್ಷ ಎ.ಸಿ.ವೆಂಕಟೇಶ್ ಎಂಬವರು ಕಾಂಗ್ರೆಸ್ ಮುಖಂಡ ಸುಧೀಂದ್ರ ಹಾಗೂ ಆನಂದ ಗುರೂಜಿ ಕುಟುಂಬದ ವೈಯಕ್ತಿಕ ವಿವರಗಳನ್ನು ಕಲೆಹಾಕಿದ್ದು ಅದನ್ನು ಪತ್ರಿಕೆಯಲ್ಲಿ ಪ್ರಕಟಿಸುವುದಾಗಿ ಹೇಳಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಅಲ್ಲದೆ, ಸುದ್ದಿಯನ್ನು ಹಾಕದಿರಲು 50 ಲಕ್ಷ ರೂ. ನೀಡುವಂತೆ ಬೆದರಿಸಿದ್ದರು.

ಬೆದರಿಕೆಯ ಬಗ್ಗೆ ಸುಧೀಂದ್ರ ನಿರ್ಲಕ್ಷ್ಯ ಮಾಡಿದ್ದರು. ಆದರೆ, ಇಷ್ಟಕ್ಕೇ ಸುಮ್ಮನಾಗದ ಆರೋಪಿಗಳು ಸುಧೀಂದ್ರ ಮತ್ತು ಆನಂದ ಗುರೂಜಿ ಬಗ್ಗೆ ಕೆಟ್ಟದ್ದಾಗಿ ಚಿತ್ರಿಸಿ ವಿಡಿಯೋ ಒಂದನ್ನು ರೆಡಿ ಮಾಡಿ, ಕೃಷ್ಣಮೂರ್ತಿ ಎಂಬಾತನ ಮೊಬೈಲ್ ನಂಬರಿನಿಂದ ಸುಧೀಂದ್ರ ಆಪ್ತ ನಾಗರಾಜ್ ಮೊಬೈಲಿಗೆ ಕಳುಹಿಸಿದ್ದ. ಇದನ್ನು ಜಾಲತಾಣದಲ್ಲಿ ಹರಿಯಬಿಟ್ಟು ಮಾನ ಕಳೆಯುತ್ತೇವೆ. ಇಲ್ಲದಿದ್ದರೆ ಹಣ ಕೊಟ್ಟುಬಿಡಿ ಎಂದು ದುಂಬಾಲು ಬಿದ್ದಿದ್ದಾರೆ. ಕಳೆದ ಜ.12ರಿಂದ 21ರ ವರೆಗೂ ಸತತವಾಗಿ ಪೀಡಿಸಿದ್ದಾರೆ. ಕೊನೆಗೆ 26 ಲಕ್ಷ ನೀಡುವಂತೆ ಹೇಳಿ ತಮ್ಮ ಡಿಮಾಂಡನ್ನು ಇಳಿಸಿದ್ದಾರೆ. ಈ ಬಗ್ಗೆ ಸುಧೀಂದ್ರ ಪಿಎ ಆಗಿರುವ ನಾಗರಾಜ್ ಕೊಟ್ಟ ದೂರಿನಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಕೃಷ್ಣಮೂರ್ತಿ ಮತ್ತು ವೆಂಕಟೇಶ್ ನನ್ನು ಬಂಧಿಸಿದ್ದಾರೆ. ಮಾರ್ಕೆಟ್ ವೇಲುಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Anand Guruji Blackmailed by Media Persons Demands 50 Lakhs. A case has been registered by the registered at the Giri Nagara Police Station
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am