ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am