ಬ್ರೇಕಿಂಗ್ ನ್ಯೂಸ್
07-02-21 09:37 am Headline Karnataka News Network ಕ್ರೈಂ
ಚಿಕ್ಕಮಗಳೂರು, ಫೆಬ್ರವರಿ 7: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ 17 ಜನರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಲಾಗಿದೆ.
ಶೃಂಗೇರಿ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಎಎಸ್ಪಿ ಶೃತಿ ನೇತೃತ್ವದಲ್ಲಿ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರು ಶೃಂಗೇರಿ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಘಟನೆ ನಡೆದು ಎರಡು ದಿನದ ಬಳಿಕ ದೂರು ದಾಖಲಿಸಿದ್ದರಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಅಪ್ರಾಪ್ತ ಮೇಲೆ ಅವಳ ಚಿಕ್ಕಮ್ಮನ ಸಹಕಾರದಿಂದ 17 ಜನರು 5 ತಿಂಗಳುಗಳ ಕಾಲ ಅತ್ಯಾಚಾರ ಮಾಡಿದ್ದರು. ಪ್ರಕರಣದ ಕುರಿತು ಈಗಾಗಲೇ 8 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ತನಿಖಾಧಿಕಾರಿ ಸಿದ್ದರಾಮಯ್ಯ ಬಿ.ಎಂ ಅವರ ಮೇಲೆ ಒತ್ತಡಗಳು ಬಂದಿದ್ದವು ಎನ್ನಲಾಗಿದೆ. ಆ ಕಾರಣಕ್ಕೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಅವರು ಶೃಂಗೇರಿಯ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಮಯ್ಯ ಬಿ.ಎಂ ಅವರನ್ನು ಅಮಾನತುಗೊಳಿಸಿದ್ದಾರೆ.

ಪಿಎಸ್ಐ ಕೀರ್ತಿ ಕುಮಾರ್ ಎತ್ತಂಗಡಿ:
ಶೃಂಗೇರಿ ಠಾಣೆ ಪಿಎಸ್ಐ ಕೀರ್ತಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಶೃಂಗೇರಿಯಿಂದ ಉತ್ತರ ಕನ್ನಡದ ಕುಮಟಾ ಠಾಣೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಶುಕ್ರವಾರ ಸಿಪಿಐ ಸಿದ್ದರಾಮಯ್ಯರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಸದ್ಯ ಪ್ರಕರಣದ ತನಿಖೆಯನ್ನು ಎಎಸ್ಪಿ ಶೃತಿ ವಹಿಸಿಕೊಂಡಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ, 8 ಆರೋಪಿಗಳ ಬಂಧನವಾಗಿದೆ.
ಉಳಿದ ಆರೋಪಿಗಳನ್ನು ಬಂಧಿಸಲು ಪೋಲಿಸರು ಹಿಂದೇಟು ಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪಿಎಸ್ಐ ವರ್ಗಾವಣೆ ಮಾಡಲಾಗಿದೆ. ಹೊಸ ತಂಡದ ಜೊತೆ ಎಎಸ್ಪಿ ಶೃತಿ ತನಿಖೆಯನ್ನು ಮುಂದುವರೆಸಿದ್ದಾರೆ.
Read: ಶೃಂಗೇರಿಯಲ್ಲಿ ಪೈಶಾಚಿಕ ಕೃತ್ಯ ; 15ರ ಬಾಲಕಿಗೆ 17ಕ್ಕೂ ಹೆಚ್ಚು ಮಂದಿ ಗ್ಯಾಂಗ್ ರೇಪ್, ಬ್ಲಾಕ್ ಮೇಲ್ !
Rape of a 15-year-old girl in Sringeri Police Inspector Siddaramaiah suspended and station PSI has been transferred. Six people have been arrested for the rape, sexual abuse and trafficking of a 15-year-old girl in Karnakta’s Chikkamagaluru district.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm