ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.


ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am