ಬ್ರೇಕಿಂಗ್ ನ್ಯೂಸ್
08-02-21 11:22 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಫೆ.8: ಕೋತಿಗಳ ಕಾಟ ತಾಳಲಾರದೆ 30ಕ್ಕೂ ಹೆಚ್ಚು ಕೋತಿಗಳಿಗೆ ವಿಷ ಉಣಿಸಿ ಸಾಗಿಸುತ್ತಿದ್ದರೆನ್ನಲಾದ ಟ್ರ್ಯಾಕ್ಟರ್ನನ್ನು ಹಿಂದು ಜಾಗರಣ ವೇದಿಕೆ ಮುಖಂಡರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ.
ತಾಲೂಕಿನ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಕೋತಿಗಳ ಕಾಟಕ್ಕೆ ತಾಳಲಾರದೆ, ಕಳೆದ ದಿನ ಬೆಳಗ್ಗೆ ಐವತ್ತು ಕ್ಕೂ ಹೆಚ್ಚು ಕೋತಿಗಳನ್ನ ಹಿಡಿದು ಒಂದೇ ಬೋನಿನಲ್ಲಿ ಬಂಧಿಸಿಡಲಾಗಿದ್ದು, ರಾತ್ರಿ 9ರ ನಂತರ ಬೋನಿನಲ್ಲಿ ಇದ್ದ ಕೋತಿಗಳು ಅಸ್ವಸ್ಥಗೊಂಡು ಕೆಲವು ಮೂರ್ಛೆ ಹೋಗಿದ್ದು ಹಾಗೂ 30 ಕ್ಕೂ ಹೆಚ್ಚು ಕೋತಿಗಳು ಉಸಿರುಗಟ್ಟಿ ಸತ್ತು ಹೋಗಿವೆ.
ತದ ನಂತರ ರಾತ್ರಿ ಸುಮಾರು 9 ಗಂಟೆಯಲ್ಲಿ ಜರಬಂಡಹಳ್ಳಿ ತಾಲೂಕು ಪಂಚಾಯತ್ ಸದಸ್ಯರಾದ ಮೋಹನ್ ಅವರ ಟ್ರ್ಯಾಕ್ಟರ್ ನಲ್ಲಿ ಗೌರಿಬಿದನೂರು ಪಟ್ಟಣದ ಕಲ್ಲೂಡಿ ರೈಲ್ವೆ ಹಳಿಯ ಬಳಿ ಬಿಡಲು ಬಂದ ವೇಳೆ ಹಿಂದೂ ಜಾಗರಣ ವೇದಿಕೆಯ ಮುಖಂಡರು ಟ್ರ್ಯಾಕ್ಟರ್ ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ, ಕೋತಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಸದ್ಯ ಟ್ರ್ಯಾಕ್ಟರ್ ಹಾಗೂ ಚಾಲಕರನ್ನು ಗೌರಿಬಿದನೂರು ಪುರ ಪೊಲೀಸರಿಗೆ ಒಪ್ಪಿಸಿ ಅರಣ್ಯ ಇಲಾಖೆಯವರು ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ದೂರು ನೀಡಿದ್ದಾರೆ.
ವಿಷ ಹಾಕಿ ಕೊಂದ ಆರೋಪ :
ಗ್ರಾಮದಲ್ಲಿ ಕೋತಿಗಳ ಕಾಟಕ್ಕೆ ಬೇಸತ್ತ ಜನ ಬೋನಿನಲ್ಲಿ ಕೋತಿಗಳನ್ನು ಸೆರೆಹಿಡಿದು, ಅವುಗಳಿಗೆ ವಿಷ ಹಾಕಿ ಕೊಲ್ಲಲಾಗಿದ್ದು, ಪ್ರಕರಣವನ್ನು ಮುಚ್ಚಲು ರೈಲ್ವೆ ಹಳಿಯ ಬಳಿ ಬಿಸಾಡಲು ಯತ್ನಿಸಿರುವ ಬಗ್ಗೆ ಮಾಹಿತಿ ಹಿಂದು ಜಾಗರಣ ವೇದಿಕೆಯ ಮುಖಂಡರಿಗೆ ಲಭ್ಯವಾಗುತ್ತಿದ್ದಂತೆ, ಸ್ಥಳಕ್ಕೆ ಧಾವಿಸಿ ಟ್ರ್ಯಾಕ್ಟರ್ನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜರಬಂಡಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮೋಹನ್ ಕೋತಿಗಳಿಗೆ ವಿಷ ಹಾಕಿರುವುದಾಗಿ ಹಿಂದು ಜಾಗರಣ ವೇದಿಕೆ ಮುಖಂಡರು ಆರೋಪಿಸಿದ್ದಾರೆ.
Over 30monkeys were suspected to be poisoned to death in Chikkaballapur, Bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am