ಬ್ರೇಕಿಂಗ್ ನ್ಯೂಸ್
08-02-21 11:22 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಫೆ.8: ಕೋತಿಗಳ ಕಾಟ ತಾಳಲಾರದೆ 30ಕ್ಕೂ ಹೆಚ್ಚು ಕೋತಿಗಳಿಗೆ ವಿಷ ಉಣಿಸಿ ಸಾಗಿಸುತ್ತಿದ್ದರೆನ್ನಲಾದ ಟ್ರ್ಯಾಕ್ಟರ್ನನ್ನು ಹಿಂದು ಜಾಗರಣ ವೇದಿಕೆ ಮುಖಂಡರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ.
ತಾಲೂಕಿನ ಮಂಚೇನಹಳ್ಳಿ ಹೋಬಳಿಯ ಜರಬಂಡಹಳ್ಳಿ ಗ್ರಾಮದಲ್ಲಿ ಕೋತಿಗಳ ಕಾಟಕ್ಕೆ ತಾಳಲಾರದೆ, ಕಳೆದ ದಿನ ಬೆಳಗ್ಗೆ ಐವತ್ತು ಕ್ಕೂ ಹೆಚ್ಚು ಕೋತಿಗಳನ್ನ ಹಿಡಿದು ಒಂದೇ ಬೋನಿನಲ್ಲಿ ಬಂಧಿಸಿಡಲಾಗಿದ್ದು, ರಾತ್ರಿ 9ರ ನಂತರ ಬೋನಿನಲ್ಲಿ ಇದ್ದ ಕೋತಿಗಳು ಅಸ್ವಸ್ಥಗೊಂಡು ಕೆಲವು ಮೂರ್ಛೆ ಹೋಗಿದ್ದು ಹಾಗೂ 30 ಕ್ಕೂ ಹೆಚ್ಚು ಕೋತಿಗಳು ಉಸಿರುಗಟ್ಟಿ ಸತ್ತು ಹೋಗಿವೆ.
ತದ ನಂತರ ರಾತ್ರಿ ಸುಮಾರು 9 ಗಂಟೆಯಲ್ಲಿ ಜರಬಂಡಹಳ್ಳಿ ತಾಲೂಕು ಪಂಚಾಯತ್ ಸದಸ್ಯರಾದ ಮೋಹನ್ ಅವರ ಟ್ರ್ಯಾಕ್ಟರ್ ನಲ್ಲಿ ಗೌರಿಬಿದನೂರು ಪಟ್ಟಣದ ಕಲ್ಲೂಡಿ ರೈಲ್ವೆ ಹಳಿಯ ಬಳಿ ಬಿಡಲು ಬಂದ ವೇಳೆ ಹಿಂದೂ ಜಾಗರಣ ವೇದಿಕೆಯ ಮುಖಂಡರು ಟ್ರ್ಯಾಕ್ಟರ್ ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ, ಕೋತಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಸದ್ಯ ಟ್ರ್ಯಾಕ್ಟರ್ ಹಾಗೂ ಚಾಲಕರನ್ನು ಗೌರಿಬಿದನೂರು ಪುರ ಪೊಲೀಸರಿಗೆ ಒಪ್ಪಿಸಿ ಅರಣ್ಯ ಇಲಾಖೆಯವರು ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ದೂರು ನೀಡಿದ್ದಾರೆ.
ವಿಷ ಹಾಕಿ ಕೊಂದ ಆರೋಪ :
ಗ್ರಾಮದಲ್ಲಿ ಕೋತಿಗಳ ಕಾಟಕ್ಕೆ ಬೇಸತ್ತ ಜನ ಬೋನಿನಲ್ಲಿ ಕೋತಿಗಳನ್ನು ಸೆರೆಹಿಡಿದು, ಅವುಗಳಿಗೆ ವಿಷ ಹಾಕಿ ಕೊಲ್ಲಲಾಗಿದ್ದು, ಪ್ರಕರಣವನ್ನು ಮುಚ್ಚಲು ರೈಲ್ವೆ ಹಳಿಯ ಬಳಿ ಬಿಸಾಡಲು ಯತ್ನಿಸಿರುವ ಬಗ್ಗೆ ಮಾಹಿತಿ ಹಿಂದು ಜಾಗರಣ ವೇದಿಕೆಯ ಮುಖಂಡರಿಗೆ ಲಭ್ಯವಾಗುತ್ತಿದ್ದಂತೆ, ಸ್ಥಳಕ್ಕೆ ಧಾವಿಸಿ ಟ್ರ್ಯಾಕ್ಟರ್ನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜರಬಂಡಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮೋಹನ್ ಕೋತಿಗಳಿಗೆ ವಿಷ ಹಾಕಿರುವುದಾಗಿ ಹಿಂದು ಜಾಗರಣ ವೇದಿಕೆ ಮುಖಂಡರು ಆರೋಪಿಸಿದ್ದಾರೆ.
Over 30monkeys were suspected to be poisoned to death in Chikkaballapur, Bengaluru.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm