ಬ್ರೇಕಿಂಗ್ ನ್ಯೂಸ್
08-02-21 04:58 pm Headline Karnataka News Network ಕ್ರೈಂ
ಪಾಲಕ್ಕಾಡ್, ಫೆ.8: ಅಲ್ಲಾನನ್ನು ಮೆಚ್ಚಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಈ ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾನಿಗೆ ಅರ್ಪಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗಲ್ಫ್ ನಿಂದ ಹಿಂತಿರುಗಿದ್ದ ಪತಿ ಮತ್ತೊಂದು ಕೋಣೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದರು. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಸಣ್ಣ ಮಗುವನ್ನು ಟಾಯ್ಲೆಟ್ ಗೆ ಕರೆದೊಯ್ದು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಮಹಿಳೆಗೆ ಮೂರು ಗಂಡು ಮಕ್ಕಳಿದ್ದು, ಸಣ್ಣ ಮಗು ಆರು ವರ್ಷದವನಿದ್ದ. ಕೊಲೆಗೈದ ಬಳಿಕ ಜ್ಞಾನೋದಯ ಆಯ್ತೋ ಏನೋ. ಕೂಡಲೇ ಪಾಲಕ್ಕಾಡ್ ಕಂಟ್ರೋಲ್ ರೂಮ್ ನಂಬರಿಗೆ ಫೋನ್ ಮಾಡಿ, ಕೃತ್ಯದ ವಿಚಾರವನ್ನು ಹೇಳಿಕೊಂಡಿದ್ದಾಳೆ.

ನಸುಕಿನ 3ರಿಂದ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಇಷ್ಟಾದರೂ, ಪಕ್ಕದ ಕೋಣೆಯಲ್ಲಿ ಮಲಗಿದ್ದ ಪತಿ ಮತ್ತು ಮತ್ತಿಬ್ಬರು ಮಕ್ಕಳಿಗೆ ಈ ವಿಷಯ ತಿಳಿಯಲಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ, ಬಾತ್ ರೂಮಿನಲ್ಲಿ ಮಗುವಿನ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಕೈಕಾಲು ಕಟ್ಟಿ ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಹಿಳೆಯನ್ನು ಬಂಧಿಸಿದ್ದು, ಅಲ್ಲಾಹನಿಗೆ ತ್ಯಾಗ ಮಾಡಲು ಈ ಕೃತ್ಯ ಎಸಗಿದ್ದಾಳೋ ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am