ಬ್ರೇಕಿಂಗ್ ನ್ಯೂಸ್
10-02-21 05:54 pm Mangalore Correspondent ಕ್ರೈಂ
ಉಳ್ಳಾಲ, ಫೆ.10 : ದೇರಳಕಟ್ಟೆಯ ಕಣಚೂರು ಎಜುಕೇಷನ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಬಿಪಿಟಿ (ಬ್ಯಾಚುಲರ್ ಆಫ್ ಫಿಸಿಯೋಥೆರಪಿ) ವಿಭಾಗದಲ್ಲಿ ರ್ಯಾಗಿಂಗ್ ಆಗಿರುವ ಬಗ್ಗೆ ಆರೋಪ ಕೇಳಿಬಂದಿದ್ದು ಉಳ್ಳಾಲ ಠಾಣೆಯಲ್ಲಿ 18 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬಿಪಿಟಿ ವಿಭಾಗದ ಪ್ರಥಮ ವರ್ಷದ ಐದು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ 18 ಮಂದಿ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ಕೊಲೆ ಬೆದರಿಕೆ ಒಡ್ಡಿದ್ದಾಗಿ ಪ್ರಕರಣ ದಾಖಲಾಗಿದೆ. ಫೆ.4 ರಂದು ಕಾಲೇಜಿನ ಕ್ಯಾಂಪಸ್ ನಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಫೆ.8ರಂದು ಠಾಣೆಗೆ ದೂರು ನೀಡಿದೆ.

ಬಿಪಿಟಿ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಮೂಲದ ಅಮಲ್ ಮಹಮ್ಮದ್, ಆಸಿಮ್ ಜಾಸಿಮ್ ಕೆ.ಎಂ., ಮಹಮ್ಮದ್ ಜೀಹಾವ್, ಆಕಿಬ್ ಜಿಹಾದ್ , ಅಹಮ್ಮದ್ ಶಿಬಿಲಿ, ಶಿನಾಸ್ ಮೊಯಿದುನ್ನಿ ಎಂಬ ಐವರನ್ನು ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಶೋಷಣೆ ಮಾಡಿದ್ದಾರೆ. ತಮ್ಮ ತರಗತಿ ಕೋಣೆಗೆ ಒತ್ತಾಯಪೂರ್ವಕ ಕರೆಸಿಕೊಂಡು ಕಿರಿಯ ವಿದ್ಯಾರ್ಥಿಗಳು ತಮ್ಮೆದುರು ತಲೆ ತಗ್ಗಿಸಿ ನಿಲ್ಲಬೇಕು, ಮೀಸೆ ಬೋಳಿಸಬೇಕು ಎಂದು ಧಮ್ಕಿ ಹಾಕಿದ್ದಾರೆ. ಐದು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ತಳ್ಳಾಟ ನಡೆಸಿದ್ದು ಈ ಬಗ್ಗೆ ಕಾಲೇಜಿನವರಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆ. ಇದರಿಂದ ನೊಂದ ಕಿರಿಯ ಐವರು ವಿದ್ಯಾರ್ಥಿಗಳು ಬಿಪಿಟಿ ಕ್ಯಾಂಪಸ್ ಮುಖ್ಯಸ್ಥರಾದ ಮಾರ್ಟಿನ್ ಜಾರ್ಜ್ ಅವರಿಗೆ ದೂರನ್ನು ನೀಡಿದ್ದರು.


ಉಪನ್ಯಾಸಕ ಮಾರ್ಟಿನ್ ಜಾರ್ಜ್ ಕಾಲೇಜಿನ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದು ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ, 18 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆರೋಪಿತರನ್ನು ಮಹಮ್ಮದ್ ಶಮ್ಮಾಸ್, ಅಕ್ಷಯ್ ಕೆ.ಎಸ್, ರಾಬಿನ್ ಬಿಜು, ಅಬ್ದುಲ್ ಇನಾಸ್ ಮಹಮ್ಮದ್, ಜಿಪ್ರಿನ್ ರೊಚಾ, ಆಲ್ವಿನ್ ಜಾಯ್ , ಸಾಧನ್ ನವಿಲ್, ಮಹಮ್ಮದ್ ಸೂರಜ್ , ಅಮೀನ್ ಶಮ್ಮಾಸ್ , ಅಬ್ದುಲ್ ವಕೀಬ್ , ಶಾಹೀನ್ ಅಬ್ದುಲ್ಲಾ , ಜೆರೊನ್ ಶೆರಿಲ್, ಬಾಸಿಲ್ ಸಿ.ಪಿ, ಅಶ್ವಿನ್ ಬಾಬು, ಜೌಹಾರ್ ಮೊಯ್ದಿನ್ , ಜಾಬಿನ್ ಮೆಹರೂಫ್, ಅಹಮ್ಮದ್ ಫಯಾಝ್ , ಅಬ್ದುಲ್ ಬಾಸಿತ್ ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು ಪ್ರಕರಣ ಹೊರಬರದಂತೆ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ.
18 students booked for ragging 5 First-year students of bachelor of physiotherapy at kanachur college in Ullal, Mangalore.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am