ಬ್ರೇಕಿಂಗ್ ನ್ಯೂಸ್
10-02-21 07:16 pm Mangaluru Correspondent ಕ್ರೈಂ
ಮಂಗಳೂರು, ಫೆ.10: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಘಟನೆ ನಡೆದಿದ್ದು ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ತಲವಾರು ದಾಳಿ ನಡೆಸಿದೆ.
ಕಾಟಿಪಳ್ಳ ನಿವಾಸಿಯಾಗಿರುವ ಪಿಂಕಿ ನವಾಜ್ ರೌಡಿ ಶೀಟರ್ ಆಗಿದ್ದು ರಸ್ತೆ ಬದಿ ನಿಂತಿದ್ದಾಗಲೇ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಮಂದಿಯಿದ್ದ ತಂಡ ತಲವಾರು ಬೀಸಿದೆ. ಆದರೆ, ನವಾಜ್ ಓಡಿ ತಪ್ಪಿಸಿಕೊಂಡಿದ್ದು ಬೆನ್ನು ಮತ್ತು ಕೈಗೆ ತೀವ್ರ ಗಾಯಗೊಂಡಿದ್ದಾನೆ. ಬಳಿಕ ಆತನನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.



ದಾಳಿ ಮಾಡಿದವನನ್ನು ಶಾಕಿಬ್ ಯಾನೆ ಶಬ್ಬು ಎಂದು ಗುರುತಿಸಲಾಗಿದ್ದು ಸರಗಳ್ಳತನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಶಾಕಿಬ್ ಕೂಡ ಕಾಟಿಪಳ್ಳದ ನಿವಾಸಿಯೇ ಆಗಿದ್ದು ಯಾಕಾಗಿ ತಲವಾರು ದಾಳಿ ನಡೆಸಿದ್ದಾನೆ ಎನ್ನೋದು ಗೊತ್ತಾಗಿಲ್ಲ.
ನಾಲ್ಕು ವರ್ಷಗಳ ಹಿಂದೆ ಹಾಡುಹಗಲೇ ಕಾಟಿಪಳ್ಳ ಪೇಟೆಯ ಬಳಿ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ನಡೆದಿತ್ತು. ಅದರಲ್ಲಿ ಪಿಂಕಿ ನವಾಜ್ ಸೇರಿ ನಾಲ್ವರು ಆರೋಪಿಗಳಿದ್ದರು. ಕೊಲೆಯ ಬಳಿಕ ಅಲ್ಲಿಂದ ಪರಾರಿಯಾಗಿದ್ದು ಪೊಲೀಸರು ವಿಷಯ ತಿಳಿದು ಫಾಲೋ ಮಾಡಿದ್ದರು. ಕಿನ್ನಿಗೋಳಿಯಿಂದ ಮೂಡುಬಿದ್ರೆ ಕಡೆಗೆ ಕಾರಿನಲ್ಲಿ ಪರಾರಿಯಾಗುತ್ತಿದ್ದ ವೇಳೆ ಪೊಲೀಸರು ಅಡ್ಡಗಟ್ಟಿದ್ದರು. ಆರೋಪಿಗಳು ತಲವಾರು ಬೀಸಿದ್ದರಿಂದ ಪೊಲೀಸರು ಅವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಈ ಪೈಕಿ ಪಿಂಕಿ ನವಾಜ್ ಕಾಲಿಗೂ ಗುಂಡು ಬಿದ್ದಿತ್ತು.
ಇಂದು ಸಂಜೆ ನವಾಜ್ ನನ್ನು ಗುರಿಯಾಗಿರಿಸಿ ದಾಳಿ ನಡೆದಿದೆ. ಪ್ರಾಥಮಿಕ ಮಾಹಿತಿಯಲ್ಲಿ ಶಾಕಿಬ್ ಮತ್ತು ತಂಡ ಈ ಕೃತ್ಯ ಎಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ನಡುವೆ, ಯಾವ ರೀತಿಯ ದ್ವೇಷ ಇತ್ತು ಎನ್ನೋದು ಗೊತ್ತಾಗಿಲ್ಲ. ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
Deepak Roa Murder accused Pinky Nawaz has been attacked by some miscreants with sword at Surathkal in Mangalore. The Surathkal police are investigating the case. Pinky Nawaz was one among the four accused of Deepak Rao Murder.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am