ಬ್ರೇಕಿಂಗ್ ನ್ಯೂಸ್
12-02-21 12:43 pm Headline Karnataka News Network ಕ್ರೈಂ
ಹೊನ್ನಾವರ, ಫೆ.12 : ಅಮೆರಿಕದಲ್ಲಿ ಉದ್ಯೋಗ ಗಿಟ್ಟಿಸುವ ಆಸೆಗೆ ಬಿದ್ದ ಯುವತಿಯೊಬ್ಬಳು ಜಾಲತಾಣದ ವಂಚನೆಗೊಳಗಾಗಿ ಲಕ್ಷಾಂತರ ರೂಪಾಯಿ ಕಳಕೊಂಡ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಹೊನ್ನಾವರ ತಾಲೂಕಿನ ನೇತ್ರಾವತಿ (25) ಹಣ ಕಳೆದುಕೊಂಡ ಯುವತಿ. ನರ್ಸಿಂಗ್ ಕೋರ್ಸ್ ಮಾಡಿದ್ದ ನೇತ್ರಾವತಿ ಕೆಲವು ವರ್ಷ ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಲಾಕ್ಡೌನ್ ಬಳಿಕ ತಮ್ಮೂರಿಗೆ ಬಂದು, ಬೇರೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತಿದ್ದರು. ಮತ್ತೆ ವಿದೇಶದಲ್ಲೇ ಉದ್ಯೋಗ ಮಾಡುವ ಆಕಾಂಕ್ಷೆಯಿಂದ ಜಾಲತಾಣದಲ್ಲಿ ಅರ್ಜಿ ಹಾಕಿ, ಹುಡುಕಾಟದಲ್ಲಿ ತೊಡಗಿದ್ದರು. ಇದೇ ವೇಳೆ, ನೇತ್ರಾವತಿ ಇ-ಮೇಲ್ ಗೆ ಮೇಲ್ ಸಂದೇಶ ಬಂದಿದ್ದು ಅಮೆರಿಕದಲ್ಲಿ ನರ್ಸಿಂಗ್ ಉದ್ಯೋಗದ ಭರವಸೆ ನೀಡಿದ್ದರು. ಅದನ್ನು ನಂಬಿ ಅರ್ಜಿ ಹಾಕಿದ್ದ ನೇತ್ರಾವತಿ ಆರು ತಿಂಗಳಲ್ಲಿ ಸರದಿಯಂತೆ ಬರೋಬ್ಬರಿ 57.14 ಲಕ್ಷ ಕಳೆದುಕೊಂಡಿದ್ದಾರೆ.

ಅಪರಿಚಿತ ಇ-ಮೇಲ್ ಸಂದೇಶದಲ್ಲಿ ಉದ್ಯೋಗಾವಕಾಶ ಹಾಗೂ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ನಮೂದಿಸಿದ್ದರು. ಅದಕ್ಕೆ ಕರೆ ಮಾಡಿದ್ದ ನೇತ್ರಾವತಿ ತನ್ನ ಪರಿಚಯ ಹೇಳಿಕೊಂಡಿದ್ದರು. ಕರೆ ಸ್ವೀಕರಿಸಿದ್ದ ವಂಚಕರು, ಯುವತಿಗೆ ನೇರವಾಗಿ ಪ್ರಶ್ನೆ ಪತ್ರಿಕೆ ಕಳುಹಿಸಿಕೊಟ್ಟು ಇಂಟರ್ವ್ಯೂ ಎಂದು ಉತ್ತರಿಸುವಂತೆ ತಿಳಿಸಿದ್ದರು. ಉತ್ತರ ಪತ್ರಿಕೆಯ ಬಳಿಕ ಆರೋಪಿಗಳು ಪಾಸ್ಪೋರ್ಟ್, ವೀಸಾ, ವೈದ್ಯಕೀಯ ಪ್ರಮಾಣಪತ್ರ, ಆರೋಗ್ಯ ವಿಮೆ ಮುಂತಾದವುಗಳಿಗೆ ಶುಲ್ಕ, ತೆರಿಗೆ ಪಾವತಿಸಲು ಹೇಳಿದ್ದರು. ಇದನ್ನು ನಿಜವೆಂದೇ ನಂಬಿದ ನೇತ್ರಾವತಿ, ಆರೋಪಿಗಳು ನೀಡಿದ್ದ ವಿವಿಧ ಬ್ಯಾಂಕ್ ಖಾತೆಗಳಿಗೆ 2020ರ ಆ.13ರಿಂದ 2021ರ ಜ.17ರ ತನಕ ಹಂತ ಹಂತವಾಗಿ 57.14 ರೂ. ಲಕ್ಷ ಹಣ ಜಮೆ ಮಾಡಿದ್ದಾರೆ.

ಅಮೆರಿಕದಲ್ಲಿ ಭಾರೀ ಸಂಬಳದ ಉದ್ಯೋಗವನ್ನು ನಂಬಿ ತಮ್ಮ ಸಂಪಾದನೆ, ಸಂಬಂಧಿಕರಲ್ಲಿ, ಪರಿಚಯಸ್ಥರಲ್ಲಿ, ಬ್ಯಾಂಕ್ಗಳಲ್ಲಿ ಸಾಲ ಮಾಡಿ ಹಣ ಹೊಂದಿಸಿದ್ದ ನೇತ್ರಾವತಿಯವರು ಆರು ತಿಂಗಳ ಅವಧಿಯಲ್ಲಿ ಇಷ್ಟೆಲ್ಲಾ ಹಣ ಪಾವತಿಸಿದ್ದರೂ ನೇಮಕಾತಿ ಆದೇಶ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡು ಹಿಂದೆ ಸಂಪರ್ಕಿಸಿದ ದೂರವಾಣಿ ನಂಬರಿಗೆ ಕರೆ ಮಾಡಿ ಕೇಳಿದರೆ, ಅವರಿಂದ ಯಾವುದೇ ರೀತಿಯ ಸ್ಪಷ್ಟನೆಯಾಗಲೀ ಹಣ ಮರಳಿಸುವ ಬಗ್ಗೆ ಪ್ರತಿಕ್ರಿಯೆಯೂ ಬರಲಿಲ್ಲ. ಇದರಿಂದ ನೇತ್ರಾವತಿಗೆ ತಾನು ಮೋಸ ಹೋಗಿದ್ದು ಅರಿವಿಗೆ ಬಂದಿದ್ದು, ಕಾರವಾರದ ಸೈಬರ್ ಅಪರಾಧ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ.
Read: Exclusive: ಕೆನಡಾದಲ್ಲಿ ನರ್ಸಿಂಗ್ ನೌಕರಿ ! ತಿಂಗಳಿಗೆ ಮೂರು ಲಕ್ಷ ವೇತನ ! ಉದ್ಯೋಗಕ್ಕೆ ನೋಂದಾಯಿಸಿದರೆ ಖೋತಾ !!
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am