ಬ್ರೇಕಿಂಗ್ ನ್ಯೂಸ್
12-02-21 12:43 pm Headline Karnataka News Network ಕ್ರೈಂ
ಹೊನ್ನಾವರ, ಫೆ.12 : ಅಮೆರಿಕದಲ್ಲಿ ಉದ್ಯೋಗ ಗಿಟ್ಟಿಸುವ ಆಸೆಗೆ ಬಿದ್ದ ಯುವತಿಯೊಬ್ಬಳು ಜಾಲತಾಣದ ವಂಚನೆಗೊಳಗಾಗಿ ಲಕ್ಷಾಂತರ ರೂಪಾಯಿ ಕಳಕೊಂಡ ಘಟನೆ ಹೊನ್ನಾವರದಲ್ಲಿ ನಡೆದಿದೆ.
ಹೊನ್ನಾವರ ತಾಲೂಕಿನ ನೇತ್ರಾವತಿ (25) ಹಣ ಕಳೆದುಕೊಂಡ ಯುವತಿ. ನರ್ಸಿಂಗ್ ಕೋರ್ಸ್ ಮಾಡಿದ್ದ ನೇತ್ರಾವತಿ ಕೆಲವು ವರ್ಷ ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಲಾಕ್ಡೌನ್ ಬಳಿಕ ತಮ್ಮೂರಿಗೆ ಬಂದು, ಬೇರೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತಿದ್ದರು. ಮತ್ತೆ ವಿದೇಶದಲ್ಲೇ ಉದ್ಯೋಗ ಮಾಡುವ ಆಕಾಂಕ್ಷೆಯಿಂದ ಜಾಲತಾಣದಲ್ಲಿ ಅರ್ಜಿ ಹಾಕಿ, ಹುಡುಕಾಟದಲ್ಲಿ ತೊಡಗಿದ್ದರು. ಇದೇ ವೇಳೆ, ನೇತ್ರಾವತಿ ಇ-ಮೇಲ್ ಗೆ ಮೇಲ್ ಸಂದೇಶ ಬಂದಿದ್ದು ಅಮೆರಿಕದಲ್ಲಿ ನರ್ಸಿಂಗ್ ಉದ್ಯೋಗದ ಭರವಸೆ ನೀಡಿದ್ದರು. ಅದನ್ನು ನಂಬಿ ಅರ್ಜಿ ಹಾಕಿದ್ದ ನೇತ್ರಾವತಿ ಆರು ತಿಂಗಳಲ್ಲಿ ಸರದಿಯಂತೆ ಬರೋಬ್ಬರಿ 57.14 ಲಕ್ಷ ಕಳೆದುಕೊಂಡಿದ್ದಾರೆ.
ಅಪರಿಚಿತ ಇ-ಮೇಲ್ ಸಂದೇಶದಲ್ಲಿ ಉದ್ಯೋಗಾವಕಾಶ ಹಾಗೂ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ನಮೂದಿಸಿದ್ದರು. ಅದಕ್ಕೆ ಕರೆ ಮಾಡಿದ್ದ ನೇತ್ರಾವತಿ ತನ್ನ ಪರಿಚಯ ಹೇಳಿಕೊಂಡಿದ್ದರು. ಕರೆ ಸ್ವೀಕರಿಸಿದ್ದ ವಂಚಕರು, ಯುವತಿಗೆ ನೇರವಾಗಿ ಪ್ರಶ್ನೆ ಪತ್ರಿಕೆ ಕಳುಹಿಸಿಕೊಟ್ಟು ಇಂಟರ್ವ್ಯೂ ಎಂದು ಉತ್ತರಿಸುವಂತೆ ತಿಳಿಸಿದ್ದರು. ಉತ್ತರ ಪತ್ರಿಕೆಯ ಬಳಿಕ ಆರೋಪಿಗಳು ಪಾಸ್ಪೋರ್ಟ್, ವೀಸಾ, ವೈದ್ಯಕೀಯ ಪ್ರಮಾಣಪತ್ರ, ಆರೋಗ್ಯ ವಿಮೆ ಮುಂತಾದವುಗಳಿಗೆ ಶುಲ್ಕ, ತೆರಿಗೆ ಪಾವತಿಸಲು ಹೇಳಿದ್ದರು. ಇದನ್ನು ನಿಜವೆಂದೇ ನಂಬಿದ ನೇತ್ರಾವತಿ, ಆರೋಪಿಗಳು ನೀಡಿದ್ದ ವಿವಿಧ ಬ್ಯಾಂಕ್ ಖಾತೆಗಳಿಗೆ 2020ರ ಆ.13ರಿಂದ 2021ರ ಜ.17ರ ತನಕ ಹಂತ ಹಂತವಾಗಿ 57.14 ರೂ. ಲಕ್ಷ ಹಣ ಜಮೆ ಮಾಡಿದ್ದಾರೆ.
ಅಮೆರಿಕದಲ್ಲಿ ಭಾರೀ ಸಂಬಳದ ಉದ್ಯೋಗವನ್ನು ನಂಬಿ ತಮ್ಮ ಸಂಪಾದನೆ, ಸಂಬಂಧಿಕರಲ್ಲಿ, ಪರಿಚಯಸ್ಥರಲ್ಲಿ, ಬ್ಯಾಂಕ್ಗಳಲ್ಲಿ ಸಾಲ ಮಾಡಿ ಹಣ ಹೊಂದಿಸಿದ್ದ ನೇತ್ರಾವತಿಯವರು ಆರು ತಿಂಗಳ ಅವಧಿಯಲ್ಲಿ ಇಷ್ಟೆಲ್ಲಾ ಹಣ ಪಾವತಿಸಿದ್ದರೂ ನೇಮಕಾತಿ ಆದೇಶ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡು ಹಿಂದೆ ಸಂಪರ್ಕಿಸಿದ ದೂರವಾಣಿ ನಂಬರಿಗೆ ಕರೆ ಮಾಡಿ ಕೇಳಿದರೆ, ಅವರಿಂದ ಯಾವುದೇ ರೀತಿಯ ಸ್ಪಷ್ಟನೆಯಾಗಲೀ ಹಣ ಮರಳಿಸುವ ಬಗ್ಗೆ ಪ್ರತಿಕ್ರಿಯೆಯೂ ಬರಲಿಲ್ಲ. ಇದರಿಂದ ನೇತ್ರಾವತಿಗೆ ತಾನು ಮೋಸ ಹೋಗಿದ್ದು ಅರಿವಿಗೆ ಬಂದಿದ್ದು, ಕಾರವಾರದ ಸೈಬರ್ ಅಪರಾಧ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ.
Read: Exclusive: ಕೆನಡಾದಲ್ಲಿ ನರ್ಸಿಂಗ್ ನೌಕರಿ ! ತಿಂಗಳಿಗೆ ಮೂರು ಲಕ್ಷ ವೇತನ ! ಉದ್ಯೋಗಕ್ಕೆ ನೋಂದಾಯಿಸಿದರೆ ಖೋತಾ !!
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm