ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm