ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am