ಬ್ರೇಕಿಂಗ್ ನ್ಯೂಸ್
15-02-21 06:18 pm Udupi Correspondent ಕ್ರೈಂ
ಉಡುಪಿ, ಫೆ.15 : ನೆರೆಮನೆಯ ವಿವಾಹಿತ ಮಹಿಳೆಯ ಮನೆಗೆ ಯುವಕನೊಬ್ಬ ಬರುತ್ತಿದ್ದುದನ್ನು ಪ್ರಶ್ನೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಫೆ.14ರಂದು ರಾತ್ರಿ ಬ್ರಹ್ಮಾವರ ಬಳಿಯ ಹೊಸೂರು ಗ್ರಾಮದ ಉದ್ಧಳ್ಕ ಎಂಬಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಉದ್ಧಳ್ಕ ನಿವಾಸಿ ನವೀನ್ ನಾಯ್ಕ(43) ಎಂದು ಗುರುತಿಸಲಾಗಿದೆ.
ಕೊಲೆ ಆರೋಪಿಗಳಾದ ಮಲ್ಪೆಯ ಗೌತಮ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಕೃತ್ಯ ಎಸಗಿದ ಮೂರೇ ಗಂಟೆಯಲ್ಲಿ ಬಂಧಿಸಿದ್ದಾರೆ.
ನವೀನ್ ನಾಯ್ಕರ ನೆರೆಮನೆಯ ನಿವಾಸಿಯಾಗಿರುವ ಸರಸ್ವತಿ ಎಂಬವರ ಮನೆಗೆ ಗೌತಮ್ ಎಂಬಾತ ಬರುತ್ತಿದ್ದ. 15 ದಿನಗಳ ಹಿಂದೆ ಸರಸ್ವತಿ ಮತ್ತು ಗೌತಮ್ ಗುಡ್ಡೆಯಂಗಡಿ ಕ್ರಾಸ್ ಬಳಿ ನಿಂತಿದ್ದಾಗ ನವೀನ್ ನಾಯ್ಕ ಪ್ರಶ್ನೆ ಮಾಡಿದ್ದ. ನೀನು ಯಾಕೆ ಸರಸ್ವತಿ ಮನೆಗೆ ಆಗಾಗ ಬರುತ್ತಿದ್ದೀಯಾ ಎಂದು ಗೌಮತ್ನನ್ನು ಕೇಳಿದ್ದ. ಈ ವಿಚಾರದಲ್ಲಿ ಇಬ್ಬರಿಗೂ ಗಲಾಟೆಯಾಗಿ ಗೌತಮ್ ಕೊಲೆ ಮಾಡುವುದಾಗಿ ನವೀನ್ ನಾಯ್ಕನಿಗೆ ಜೀವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಗೌತಮ್ ನಿನ್ನೆ ರಾತ್ರಿ ಇತರರೊಂದಿಗೆ ಸೇರಿ ಕಾರಿನಲ್ಲಿ ನವೀನ್ ನಾಯ್ಕನ ಮನೆಗೆ ಬಂದಿದ್ದು ಆಯುಧದಿಂದ ಎದೆಗೆ, ಮುಖಕ್ಕೆ ತಲೆಗೆ ಬಲವಾಗಿ ಹೊಡೆದು ನವೀನ್ ನನ್ನು ಕೊಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Angry over youth coming to Neighbour Women's house Man kills youth at Udupi. Six persons haven been arrested in this case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am