ಬ್ರೇಕಿಂಗ್ ನ್ಯೂಸ್
16-02-21 10:23 pm Mangaluru Correspondant ಕ್ರೈಂ
ಮಂಗಳೂರು, ಫೆ.16: ಕಾಂಗ್ರೆಸ್ ಮುಖಂಡ ಕಳ್ಳಿಗೆ ತಾರನಾಥ್ ಶೆಟ್ಟಿ ಹಾಗೂ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು ಅವರದೇ ಹೆಸರಲ್ಲಿ ನಕಲಿ ಖಾತೆ ತೆರೆದು ಆಪ್ತರಲ್ಲಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ವಿಚಾರ ಬೆಳಕಿಗೆ ಬಂದಿದೆ.
ಐ.ಬಿ.ಸಂದೀಪ್ ಹೊಸ ದಿಗಂತ ಪತ್ರಿಕೆಯ ಪುತ್ತೂರು ವರದಿಗಾರರಾಗಿದ್ದು ಅವರ ಹೆಸರಲ್ಲಿ ಬೇರೆಯದ್ದೇ ಖಾತೆ ತೆರೆಯಲಾಗಿದ್ದು ಆಪ್ತರಲ್ಲಿ ಹಣ ಕೇಳಿದ್ದಾರೆ. ಹಣದ ಅಗತ್ಯವಿದೆ, ಗೂಗಲ್ ಪೇ ಅಕೌಂಟ್ ಇದ್ದರೆ ಕೂಡಲೇ ವರ್ಗಾಯಿಸುವಂತೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಬ್ಯಾಂಕ್ ಖಾತೆ ಸಂಖ್ಯೆಯನ್ನು ಕಳಿಸುವಂತೆ ಕೇಳಿಕೊಂಡಿದ್ದಾರೆ. ಎಚ್ ಡಿ ಎಫ್ ಸಿ ಬ್ಯಾಂಕಿನ ಖಾತೆ ಸಂಖ್ಯೆಯನ್ನು ಹ್ಯಾಕರ್ಸ್ ಕಳಿಸಿದ್ದರು. ಆದರೆ, ಹಣ ಕಳಿಸುವ ಮೊದಲು ಮೊಬೈಲ್ ನಂಬರ್ ಇದ್ದವರು ಸಂದೀಪ್ ಅವರನ್ನು ಸಂಪರ್ಕಿಸಿ ಮಾಹಿತಿ ಕೇಳಿದ್ದಾರೆ. ಅಷ್ಟೊತ್ತಿಗೆ, ಫೇಸ್ಬುಕ್ ಹ್ಯಾಕ್ ಆಗಿದ್ದು ಗೊತ್ತಾಗಿದೆ. ಸ್ವತಃ ತನ್ನ ಖಾತೆ ಹ್ಯಾಕ್ ಆಗಿದ್ದು ಯಾರಾದ್ರು ಹಣ ನೀಡುವಂತೆ ಕೇಳಿಕೊಂಡರೆ ತನ್ನನ್ನು ಸಂಪರ್ಕಿಸುವಂತೆ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರಿನ ಕಾಂಗ್ರೆಸ್ ಮುಖಂಡ ಕಳ್ಳಿಕೆ ತಾರನಾಥ್ ಶೆಟ್ಟಿಯವರ ಫೇಸ್ಬುಕ್ ಅನ್ನೂ ಯಾರೋ ಹ್ಯಾಕ್ ಮಾಡಿದ್ದು ತನ್ನ ಹೆಸರಲ್ಲಿ ಯಾರಾದ್ರೂ ಹಣ ಕೇಳಿದರೆ ಜಾಗ್ರತೆ ವಹಿಸಿ. ಅಂಥ ಮೆಸೇಜ್ ಹಾಕಿದರೆ ನನ್ನ ಗಮನಕ್ಕೆ ತನ್ನಿ ಎಂದು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ಈ ರೀತಿ ಫೇಸ್ಬುಕ್ ಹ್ಯಾಕ್ ಮಾಡಿ ಹಣ ಕೇಳುವುದು ಕಾಮನ್ ಆಗಿದ್ದು ಆಗಂತುಕರು ದೂರದಲ್ಲಿ ಕುಳಿತು ಹಣ ಪೀಕಿಸುವ ವಿಚಾರ ಕರಾವಳಿಯಲ್ಲಿ ಪೊಲೀಸ್, ಪತ್ರಕರ್ತರು, ರಾಜಕೀಯ ಮುಖಂಡರ ಹೆಸರಲ್ಲಿ ಹಣ ಸಂಗ್ರಹಿಸುವ ಪ್ರಯತ್ನಗಳು ಹಲವು ಬಾರಿ ಬೆಳಕಿಗೆ ಬಂದಿದೆ.
Read: ಮಂಗಳೂರು ಪಾಲಿಕೆ ಉಪಾಯುಕ್ತರ ಹೆಸರಲ್ಲಿ ನಕಲಿ ಐಡಿ ; ಹಲವರಿಂದ ಹಣ ಪೀಕಿಸಿದ ಖದೀಮ !!
Online Fraudsters hack Facebook account of Senior Journalist and Congress leader of Mangalore and demand money from their friends on Facebook using messenger.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am