ಬ್ರೇಕಿಂಗ್ ನ್ಯೂಸ್
22-02-21 02:45 pm Bangalore Correspondent ಕ್ರೈಂ
ಬೆಂಗಳೂರು, ಫೆಬ್ರವರಿ 22: ಅಮೆರಿಕಾದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಉಡುಗೊರೆ ಬಂದಿದೆ. ಕಸ್ಟಮ್ಸ್ ಕ್ಲಿಯರ್ ಮಾಡೋಕೆ ಹತ್ತು ಸಾವಿರ ಕಟ್ಟಿ ಎಂದು ಯಾರಾದ್ರೂ ಕರೆ ಮಾಡಿದ್ರೆ, ಅಂತಹ ಕರೆಗಳನ್ನು ತಿರಸ್ಕರಿಸಿ. ಸ್ವಲ್ಪ ಯಾಮಾರಿದ್ರೆ ಬ್ಯಾಂಕ್ ಖಾತೆಯಲ್ಲಿರುವ ಹಣ ಮಾಯ ಮಾಡಿ ಬೀದಿಗೆ ತಂದು ನಿಲ್ಲಿಸುತ್ತಾರೆ. ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ಸೈಬರ್ ಕಳ್ಳರು ವೃದ್ಧ ಅಜ್ಜನಿಗೆ ಹೆದರಿಸಿ 39 ಲಕ್ಷ ರೂಪಾಯಿ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಹಾಕಿಸಿಕೊಂಡು ಮೋಸ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.
ಫೇಸ್ ಬುಕ್ ನಲ್ಲಿ ವೃದ್ಧ ಅಜ್ಜನಿಗೆ ರೇವ್ ಸಿಸ್ಟರ್ ಜಿನಾ ಮ್ಯಾಥ್ಯೂ ಎಂಬುವರು ಪರಿಚಯವಾಗಿದ್ದರು. ಇಬ್ಬರು ಪರಿಚಯವಾದ ಬಳಿಕ ಮೆಸೇಂಜರ್ ನಲ್ಲಿ ಚಾಟ್ ಮಾಡುತ್ತಿದ್ದರು. ಬಳಿಕ ವಾಟ್ಸಪ್ ನಂಬರ್ ಪಡೆದು ಇಬ್ಬರೂ ತಿಂಗಳಾನುಗಟ್ಟಲೇ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದರು. ಹೀಗೆ ಚಾಟಿಂಗ್ ಮಾಡುತ್ತಿರುವಾಗಲೇ ಅಮೆರಿಕಾ ಕ್ಯಾಲಿಪೋರ್ನಿಯಾದಿಂದ ಉಡುಗೊರೆ ಕಳಿಸಿ ಕೊಡುತ್ತಿರುವುದಾಗಿ ಕರೆ ಮಾಡಿದ್ದ ಜಿನಾ. ಆಕೆಯ ಮಾತು ಕೇಳಿ ಖುಷಿಯಲ್ಲಿ ತೇಲಾಡಿದ್ದ ವೃದ್ಧ ಅಜ್ಜ ಉಡುಗರೆ ಸ್ವೀಕರಿಸುವ ತವಕದಲ್ಲಿದ್ದರು.

ಇದೇ ವೇಳೆ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಬಂದಿದ್ದು, ನಿಮಗೆ ಅಮೆರಿಕಾದಿಂದ ಗಿಫ್ಟ್ ಬಂದಿದೆ. ಅದನ್ನು ನೀವು ಸ್ವೀಕರಿಸಬೇಕಾದರೆ 30 ಸಾವಿರ ರೂ. ಕಸ್ಟಮ್ಸ್ ಶುಲ್ಕ ಪಾವತಿಸಬೇಕು. ಹಣ ಪಾವತಿ ಮಾಡದಿದ್ದರೆ ಮನಿ ಲ್ಯಾಂಡ್ರಿಗ್ ಪ್ರಕರಣದಲ್ಲಿ ಬಂಧಿಸುವುದಾಗಿ ಹೆದರಿಸಿದ್ದರು. ಇದಕ್ಕೆ ಹೆದರಿದ ವೃದ್ಧ ಅಜ್ಜ, ತನ್ನ ಬ್ಯಾಂಕ್ ಖಾತೆಯಲ್ಲಿದ್ದ 30 ಸಾವಿರ ಹಣವನ್ನು ಪಾವತಿ ಮಾಡಿದ್ದರು. ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ ಪದೇ ಪದೇ ಕರೆ ಮಾಡುತ್ತಿದ್ದ ಸೈಬರ್ ವಂಚಕರು, ಲಕ್ಷ ಲಕ್ಷ ಹಣ ಪೀಕಿದ್ದಾರೆ.

ಹೀಗೆ ಹಂತ ಹಂತವಾಗಿ 39.73 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ. ಜೀವನಾಧಾಕ್ಕೆಂದು ಇಟ್ಟುಕೊಂಡಿದ್ದ ಎಲ್ಲಾ ಹಣ ಕಳೆದುಕೊಂಡಿದ್ದಾರೆ. ಆನಂತರ ತಾನು ಹಣ ಹಾಕಿದ್ದು ಕಸ್ಟಮ್ಸ್ ಅಧಿಕಾರಿಗಳ ಅಲ್ಲ, ಬದಲಿಗೆ ಕೊಟ್ಟಿದ್ದು ಸೈಬರ್ ವಂಚಕರಿಗೆ ಎಂದು ಅರಿವಾಗಿದೆ. ಜಿನಾಗೆ ಮತ್ತೆ ಕರೆ ಮಾಡಿದರೆ ನಂಬರ್ ಸ್ವಿಚ್ ಆಫ್ ಆಗಿದೆ. ಸೈಬರ್ ವಂಚಕರು ಜಿನಾ ಹೆಸರಿನಲ್ಲಿ ವೃದ್ಧ ಅಜ್ಜನ ಜತೆ ನಿರಂತರ ಚಾಟ್ ಮಾಡಿ ನಲವತ್ತು ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ್ದಾರೆ. ಹಣ ಕಳೆದುಕೊಂಡ ಬಳಿಕ ಅರಿವಿಗೆ ಬಂದ ಬಳಿಕ ಬ್ಯಾಂಕ್ ನಲ್ಲಿ ಪರಿಶೀಲನೆ ನಡೆಸಿದಾಗ, ಉತ್ತರ ಭಾರತದ ರಾಜ್ಯಗಳಿಗೆ ಹಣ ವರ್ಗಾವವಣೆ ಮಾಡಿರುವುದು ಗೊತ್ತಾಗಿದೆ. ಈ ಕುರಿತು ಅಜ್ಜ ವೈಟ್ ಫೀಲ್ಡ್ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
A old man from Bangalore was duped Rs 34 lakh by a woman he met on social networking site. The accused committed online fraud with the help of a fake customs official.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm