ಬ್ರೇಕಿಂಗ್ ನ್ಯೂಸ್
23-02-21 04:01 pm Mangalore Correspondent ಕ್ರೈಂ
ಮಂಗಳೂರು, ಫೆ.23: ಎಟಿಎಂ ಯಂತ್ರದಲ್ಲಿ ಸ್ಕಿಮ್ಮಿಂಗ್ ಯಂತ್ರ ಅಳವಡಿಸುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಂಗಳಾದೇವಿ ಬಳಿ ನಡೆದಿದೆ.
ಮಂಗಳಾದೇವಿ ಪೆಟ್ರೋಲ್ ಪಂಪ್ ಮುಂದೆ ಹಾಡಹಗಲೇ ಘಟನೆ ನಡೆದಿದ್ದು, ಇಬ್ಬರು ಎಟಿಎಂ ಒಳಗಡೆ ಸಂಶಯಾಸ್ಪದವಾಗಿ ನಡೆದುಕೊಂಡಿದ್ದ ವೇಳೆ ಸಂಶಯಗೊಂಡ ಬಂಕ್ ಸಿಬಂದಿ ಮತ್ತು ಸ್ಥಳೀಯರು ಎಟಿಎಂ ಬಳಿ ತೆರಳಿದ್ದಾರೆ. ಮೂರ್ನಾಲ್ಕು ಯುವಕರು ಹೊರಗಡೆ ನಿಂತಿದ್ದನ್ನು ನೋಡಿದ ಯುವಕರಿಬ್ಬರು ಅಲ್ಲಿಂದ ಓಡಿ ತಪ್ಪಿಸಲು ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸಾರ್ವಜನಿಕರು ಹಿಡಿದು ಕೂಡಿಹಾಕಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರು ಆರೋಪಿಗಳಿಬ್ಬರನ್ನು ಹಿಡಿದಿಡುವ ವಿಡಿಯೋ ಸೆರೆಯಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಡಿಸಿಪಿ ಹರಿರಾಮ್ ಶಂಕರ್ ಅವರಲ್ಲಿ ಕೇಳಿದಾಗ, ಯುವಕರಿಬ್ಬರು ಎಟಿಎಂ ಸ್ಕಿಮ್ಮಿಂಗ್ ಯಂತ್ರ ಅಳವಡಿಸಲು ಸಂಚು ಹೂಡಿದ್ದರು ಎನ್ನೋ ವಿಚಾರವನ್ನು ಹೊರಗೆಡಹಿದ್ದಾರೆ. ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹಲವು ಕಡೆಗಳಲ್ಲಿ ಎಟಿಎಂ ಯಂತ್ರಗಳನ್ನು ಸ್ಕಿಮ್ಮಿಂಗ್ ಮಾಡಿ, ನಕಲಿ ಕಾರ್ಡ್ ಗಳನ್ನು ತಯಾರಿಸಿ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಕೃತ್ಯ ಬೆಳಕಿಗೆ ಬಂದಿದೆ.
ಈ ರೀತಿಯ ಐದಾರು ಮಂದಿಯ ತಂಡ ಮಂಗಳೂರಿನಲ್ಲಿ ಸಕ್ರಿಯವಾಗಿದೆ ಎನ್ನಲಾಗಿದ್ದು, ಇದೇ ತಂಡದ ಇಬ್ಬರು ಈಗ ಸಿಕ್ಕಿಬಿದ್ದವರು ಎನ್ನಲಾಗುತ್ತಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದು, ಅವರ ಸಹಚರರ ಪತ್ತೆಗೆ ಬಲೆ ಬೀಸಿದ್ದಾರೆ.
Video:
Two persons have been detained in connection to attempt to ATM ‘skimming’ at Mangaladevi in Mangalore.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm