ಬ್ರೇಕಿಂಗ್ ನ್ಯೂಸ್
23-02-21 04:01 pm Mangalore Correspondent ಕ್ರೈಂ
ಮಂಗಳೂರು, ಫೆ.23: ಎಟಿಎಂ ಯಂತ್ರದಲ್ಲಿ ಸ್ಕಿಮ್ಮಿಂಗ್ ಯಂತ್ರ ಅಳವಡಿಸುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಂಗಳಾದೇವಿ ಬಳಿ ನಡೆದಿದೆ.
ಮಂಗಳಾದೇವಿ ಪೆಟ್ರೋಲ್ ಪಂಪ್ ಮುಂದೆ ಹಾಡಹಗಲೇ ಘಟನೆ ನಡೆದಿದ್ದು, ಇಬ್ಬರು ಎಟಿಎಂ ಒಳಗಡೆ ಸಂಶಯಾಸ್ಪದವಾಗಿ ನಡೆದುಕೊಂಡಿದ್ದ ವೇಳೆ ಸಂಶಯಗೊಂಡ ಬಂಕ್ ಸಿಬಂದಿ ಮತ್ತು ಸ್ಥಳೀಯರು ಎಟಿಎಂ ಬಳಿ ತೆರಳಿದ್ದಾರೆ. ಮೂರ್ನಾಲ್ಕು ಯುವಕರು ಹೊರಗಡೆ ನಿಂತಿದ್ದನ್ನು ನೋಡಿದ ಯುವಕರಿಬ್ಬರು ಅಲ್ಲಿಂದ ಓಡಿ ತಪ್ಪಿಸಲು ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸಾರ್ವಜನಿಕರು ಹಿಡಿದು ಕೂಡಿಹಾಕಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರು ಆರೋಪಿಗಳಿಬ್ಬರನ್ನು ಹಿಡಿದಿಡುವ ವಿಡಿಯೋ ಸೆರೆಯಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಡಿಸಿಪಿ ಹರಿರಾಮ್ ಶಂಕರ್ ಅವರಲ್ಲಿ ಕೇಳಿದಾಗ, ಯುವಕರಿಬ್ಬರು ಎಟಿಎಂ ಸ್ಕಿಮ್ಮಿಂಗ್ ಯಂತ್ರ ಅಳವಡಿಸಲು ಸಂಚು ಹೂಡಿದ್ದರು ಎನ್ನೋ ವಿಚಾರವನ್ನು ಹೊರಗೆಡಹಿದ್ದಾರೆ. ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹಲವು ಕಡೆಗಳಲ್ಲಿ ಎಟಿಎಂ ಯಂತ್ರಗಳನ್ನು ಸ್ಕಿಮ್ಮಿಂಗ್ ಮಾಡಿ, ನಕಲಿ ಕಾರ್ಡ್ ಗಳನ್ನು ತಯಾರಿಸಿ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಕೃತ್ಯ ಬೆಳಕಿಗೆ ಬಂದಿದೆ.

ಈ ರೀತಿಯ ಐದಾರು ಮಂದಿಯ ತಂಡ ಮಂಗಳೂರಿನಲ್ಲಿ ಸಕ್ರಿಯವಾಗಿದೆ ಎನ್ನಲಾಗಿದ್ದು, ಇದೇ ತಂಡದ ಇಬ್ಬರು ಈಗ ಸಿಕ್ಕಿಬಿದ್ದವರು ಎನ್ನಲಾಗುತ್ತಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದು, ಅವರ ಸಹಚರರ ಪತ್ತೆಗೆ ಬಲೆ ಬೀಸಿದ್ದಾರೆ.
Video:
Two persons have been detained in connection to attempt to ATM ‘skimming’ at Mangaladevi in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am