ಬ್ರೇಕಿಂಗ್ ನ್ಯೂಸ್
23-02-21 04:01 pm Mangalore Correspondent ಕ್ರೈಂ
ಮಂಗಳೂರು, ಫೆ.23: ಎಟಿಎಂ ಯಂತ್ರದಲ್ಲಿ ಸ್ಕಿಮ್ಮಿಂಗ್ ಯಂತ್ರ ಅಳವಡಿಸುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಂಗಳಾದೇವಿ ಬಳಿ ನಡೆದಿದೆ.
ಮಂಗಳಾದೇವಿ ಪೆಟ್ರೋಲ್ ಪಂಪ್ ಮುಂದೆ ಹಾಡಹಗಲೇ ಘಟನೆ ನಡೆದಿದ್ದು, ಇಬ್ಬರು ಎಟಿಎಂ ಒಳಗಡೆ ಸಂಶಯಾಸ್ಪದವಾಗಿ ನಡೆದುಕೊಂಡಿದ್ದ ವೇಳೆ ಸಂಶಯಗೊಂಡ ಬಂಕ್ ಸಿಬಂದಿ ಮತ್ತು ಸ್ಥಳೀಯರು ಎಟಿಎಂ ಬಳಿ ತೆರಳಿದ್ದಾರೆ. ಮೂರ್ನಾಲ್ಕು ಯುವಕರು ಹೊರಗಡೆ ನಿಂತಿದ್ದನ್ನು ನೋಡಿದ ಯುವಕರಿಬ್ಬರು ಅಲ್ಲಿಂದ ಓಡಿ ತಪ್ಪಿಸಲು ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸಾರ್ವಜನಿಕರು ಹಿಡಿದು ಕೂಡಿಹಾಕಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರು ಆರೋಪಿಗಳಿಬ್ಬರನ್ನು ಹಿಡಿದಿಡುವ ವಿಡಿಯೋ ಸೆರೆಯಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಡಿಸಿಪಿ ಹರಿರಾಮ್ ಶಂಕರ್ ಅವರಲ್ಲಿ ಕೇಳಿದಾಗ, ಯುವಕರಿಬ್ಬರು ಎಟಿಎಂ ಸ್ಕಿಮ್ಮಿಂಗ್ ಯಂತ್ರ ಅಳವಡಿಸಲು ಸಂಚು ಹೂಡಿದ್ದರು ಎನ್ನೋ ವಿಚಾರವನ್ನು ಹೊರಗೆಡಹಿದ್ದಾರೆ. ಮಂಗಳೂರಿನಲ್ಲಿ ಕಳೆದ ಮೂರು ತಿಂಗಳಲ್ಲಿ ಹಲವು ಕಡೆಗಳಲ್ಲಿ ಎಟಿಎಂ ಯಂತ್ರಗಳನ್ನು ಸ್ಕಿಮ್ಮಿಂಗ್ ಮಾಡಿ, ನಕಲಿ ಕಾರ್ಡ್ ಗಳನ್ನು ತಯಾರಿಸಿ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಕೃತ್ಯ ಬೆಳಕಿಗೆ ಬಂದಿದೆ.

ಈ ರೀತಿಯ ಐದಾರು ಮಂದಿಯ ತಂಡ ಮಂಗಳೂರಿನಲ್ಲಿ ಸಕ್ರಿಯವಾಗಿದೆ ಎನ್ನಲಾಗಿದ್ದು, ಇದೇ ತಂಡದ ಇಬ್ಬರು ಈಗ ಸಿಕ್ಕಿಬಿದ್ದವರು ಎನ್ನಲಾಗುತ್ತಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದು, ಅವರ ಸಹಚರರ ಪತ್ತೆಗೆ ಬಲೆ ಬೀಸಿದ್ದಾರೆ.
Video:
Two persons have been detained in connection to attempt to ATM ‘skimming’ at Mangaladevi in Mangalore.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm