ಬ್ರೇಕಿಂಗ್ ನ್ಯೂಸ್
23-02-21 07:38 pm Mangaluru Correspondent ಕ್ರೈಂ
ಲಕ್ನೋ, ಫೆ. 23: ಇಲ್ಲಿನ ಶಹಜಹಾನ್ಪುರದ ಹೆದ್ದಾರಿ ಬಳಿ ಸೋಮವಾರ ಸಂಜೆ ಅರ್ಧ ಸುಟ್ಟ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿದ್ದು, ಘಟನೆ ಭಾರೀ ಆಘಾತ ಸೃಷ್ಟಿಸಿದೆ.
ಶಹಜಹಾನ್ ಪುರದ ಸ್ವಾಮಿ ಸುಖದೇವಾನಂದ್ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಬಳಿ ಬಿದ್ದುಕೊಂಡಿದ್ದ ಹದಿಹರೆಯದ ವಿದ್ಯಾರ್ಥಿನಿಯ ಮೈಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸಾಯಿಸಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಶಹಜಹಾನ್ಪುರ್ ಎಸ್ಪಿ ಎಸ್.ಆನಂದ್, ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಆಸ್ಪತ್ರೆಗೆ ಸೇರಿಸಿರುವುದಾಗಿ ತಿಳಿಸಿದ್ದಾರೆ.
ಯುವತಿ ಪತ್ತೆಯಾದ ಸಂದರ್ಭದಲ್ಲಿ ಆಕೆಯ ದೇಹ ಭಾಗಶಃ ಸುಟ್ಟಿತ್ತು. ಆಕೆಯಿಂದ ತಂದೆಯ ಫೋನ್ ನಂಬರ್ ಪಡೆದು ಅವರಿಗೆ ಮಾಹಿತಿ ನೀಡಿದೆವು. ತಂದೆ ಹೇಳುವ ಪ್ರಕಾರ ಅವರು ಮಗಳನ್ನು ಕಾಲೇಜಿನಿಂದ ಕರೆದುಕೊಂಡು ಹೋಗಲು ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಮಗಳು ಕಾಲೇಜಿನ ಬಳಿ ಇರಲಿಲ್ಲ. ಸ್ವಲ್ಪ ಹೊತ್ತು ಮಗಳಿಗೆ ಕಾದ ತಂದೆ ಆಮೇಲೆ ಹುಡುಕಾಡಲು ಶುರುಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವತಿ ಜಾಸ್ತಿ ಮಾಹಿತಿ ನೀಡುವ ಸ್ಥಿತಿಯಲ್ಲಿ ಇಲ್ಲವಾದ್ದರಿಂದ ಆಕೆ ಚೇತರಿಸಲು ಕಾಯುತ್ತಿದ್ದೇವೆ. ಆಕೆಯಿಂದ ಘಟನೆ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಪಷ್ಟನೆ ಸಿಗಲಿದೆ. ತನಿಖೆಯ ಕಾರಣಕ್ಕಾಗಿ ಆಕೆಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಇನ್ನೊಂದೆಡೆ ಆಕೆಯ ತಂದೆ, ಮಗಳ ಪರಿಸ್ಥಿತಿ ಕಂಡು ಆಘಾತಗೊಂಡಿದ್ದಾರೆ. ಕೊರೊನಾ ಕಾರಣದಿಂದ 15 ದಿನಗಳಿಗೊಮ್ಮೆ ಸ್ವತಃ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದೆ. ವಾಪಸ್ ಹೋಗುವಾಗಲೂ ನಾನೇ ಬಂದು ಕರೆದೊಯ್ಯುತ್ತಿದ್ದೆ. ಇಂದು ಏನಾಗಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ.
A girl was found lying severely burnt along a national highway in Shahjahanpur district in Uttar Pradesh, police said on Tuesday.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm