ಬ್ರೇಕಿಂಗ್ ನ್ಯೂಸ್
26-02-21 11:52 am Headline Karnataka News Network ಕ್ರೈಂ
ಯಲ್ಲಾಪುರ, ಫೆ. 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.
ತನಿಖೆ ಚುರುಕು
ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
Yellapur school girl goes missing later found in the forest being tied to a tree. The police are now investigating the case.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 02:34 pm
HK News Staffer
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm