ಬ್ರೇಕಿಂಗ್ ನ್ಯೂಸ್
19-08-20 11:40 am Headline Karnataka News Network ಕ್ರೈಂ
ನವದೆಹಲಿ, ಆಗಸ್ಟ್ 19: ನಟಿ ರಿಯಾ ಚಕ್ರವರ್ತಿ ವಿರುದ್ಧ ನಟ ಸುಶಾಂತ್ ಅವರ ತಂದೆ ಬಿಹಾರದ ಪಾಟ್ನದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೃಷಿಕೇಶ ರಾಯ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶ ನೀಡಿದ್ದಾರೆ.
ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ಐಆರ್ ಸಿಂಧುವಿಲ್ಲ. ಅದನ್ನು ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಮಾಡಿಕೊಂಡ ಮನವಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಸರಿಯಾಗಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ ಸರ್ಕಾರ ಸಿಬಿಐ ತನಿಖೆಗೆ ಸಹಕರಿಸಬೇಕು ಹಾಗೂ ಮಹಾರಾಷ್ಟ್ರ ಪೊಲೀಸರು ಅಗತ್ಯ ದಾಖಲೆಗಳನ್ನು ಸಿಬಿಐಗೆ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಸುಶಾಂತ್ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟನ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಪ್ರಕರಣ ದಾಖಲಿಸಿದ್ದರು. ಪಾಟ್ನಾದಲ್ಲಿ ನಟ ಸುಶಾಂತ್ ಅವರ ತಂದೆ ನೀಡಿರುವ ದೂರನ್ನು ಆಧರಿಸಿ ನಟಿ ರಿಯಾ ಚಕ್ರವರ್ತಿ ವಿರುದ್ಧ 306 (ಆತ್ಮಹತ್ಯೆಗೆ ಪ್ರಚೋದನೆ), 341 (ತಪ್ಪಾದ ಸಂಯಮಕ್ಕಾಗಿ ಶಿಕ್ಷೆ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ), 380 (ವಾಸಿಸುವ ಮನೆಯಲ್ಲೇ ಕಳ್ಳತನ), 406 (ವಿಶ್ವಾಸಾರ್ಹ ಉಲ್ಲಂಘನೆ) ಮತ್ತು 420 (ಮೋಸ ಮತ್ತು ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm