ಬ್ರೇಕಿಂಗ್ ನ್ಯೂಸ್
19-08-20 11:40 am Headline Karnataka News Network ಕ್ರೈಂ
ನವದೆಹಲಿ, ಆಗಸ್ಟ್ 19: ನಟಿ ರಿಯಾ ಚಕ್ರವರ್ತಿ ವಿರುದ್ಧ ನಟ ಸುಶಾಂತ್ ಅವರ ತಂದೆ ಬಿಹಾರದ ಪಾಟ್ನದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೃಷಿಕೇಶ ರಾಯ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶ ನೀಡಿದ್ದಾರೆ.
ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ಐಆರ್ ಸಿಂಧುವಿಲ್ಲ. ಅದನ್ನು ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಮಾಡಿಕೊಂಡ ಮನವಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಸರಿಯಾಗಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ ಸರ್ಕಾರ ಸಿಬಿಐ ತನಿಖೆಗೆ ಸಹಕರಿಸಬೇಕು ಹಾಗೂ ಮಹಾರಾಷ್ಟ್ರ ಪೊಲೀಸರು ಅಗತ್ಯ ದಾಖಲೆಗಳನ್ನು ಸಿಬಿಐಗೆ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಸುಶಾಂತ್ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟನ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಪ್ರಕರಣ ದಾಖಲಿಸಿದ್ದರು. ಪಾಟ್ನಾದಲ್ಲಿ ನಟ ಸುಶಾಂತ್ ಅವರ ತಂದೆ ನೀಡಿರುವ ದೂರನ್ನು ಆಧರಿಸಿ ನಟಿ ರಿಯಾ ಚಕ್ರವರ್ತಿ ವಿರುದ್ಧ 306 (ಆತ್ಮಹತ್ಯೆಗೆ ಪ್ರಚೋದನೆ), 341 (ತಪ್ಪಾದ ಸಂಯಮಕ್ಕಾಗಿ ಶಿಕ್ಷೆ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ), 380 (ವಾಸಿಸುವ ಮನೆಯಲ್ಲೇ ಕಳ್ಳತನ), 406 (ವಿಶ್ವಾಸಾರ್ಹ ಉಲ್ಲಂಘನೆ) ಮತ್ತು 420 (ಮೋಸ ಮತ್ತು ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm