ಬ್ರೇಕಿಂಗ್ ನ್ಯೂಸ್
19-08-20 11:40 am Headline Karnataka News Network ಕ್ರೈಂ
ನವದೆಹಲಿ, ಆಗಸ್ಟ್ 19: ನಟಿ ರಿಯಾ ಚಕ್ರವರ್ತಿ ವಿರುದ್ಧ ನಟ ಸುಶಾಂತ್ ಅವರ ತಂದೆ ಬಿಹಾರದ ಪಾಟ್ನದಲ್ಲಿ ದಾಖಲಿಸಿರುವ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಹೃಷಿಕೇಶ ರಾಯ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆದೇಶ ನೀಡಿದ್ದಾರೆ.
ಪಾಟ್ನಾದಲ್ಲಿ ದಾಖಲಾಗಿದ್ದ ಎಫ್ಐಆರ್ ಸಿಂಧುವಿಲ್ಲ. ಅದನ್ನು ಮುಂಬೈಗೆ ವರ್ಗಾಯಿಸಬೇಕೆಂದು ರಿಯಾ ಮಾಡಿಕೊಂಡ ಮನವಿಯನ್ನೂ ಕೋರ್ಟ್ ತಿರಸ್ಕರಿಸಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್ಐಆರ್ ಸರಿಯಾಗಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರ ಸರ್ಕಾರ ಸಿಬಿಐ ತನಿಖೆಗೆ ಸಹಕರಿಸಬೇಕು ಹಾಗೂ ಮಹಾರಾಷ್ಟ್ರ ಪೊಲೀಸರು ಅಗತ್ಯ ದಾಖಲೆಗಳನ್ನು ಸಿಬಿಐಗೆ ಒದಗಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಸುಶಾಂತ್ ಸಾವಿಗೆ ನಟಿ ರಿಯಾ ಚಕ್ರವರ್ತಿ ಅವರೇ ಕಾರಣ ಎಂದು ಆರೋಪಿಸಿದ್ದ ಅವರ ತಂದೆ ಕೆ.ಕೆ. ಸಿಂಗ್ ಕಳೆದ ಜುಲೈ 28 ರಂದು ಪಾಟ್ನಾದಲ್ಲಿ ಪ್ರತ್ಯೇಕ ದೂರು ಸಲ್ಲಿಸಿದ್ದರು. ಈ ದೂರಿನಲ್ಲಿ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ, ಕ್ರಿಮಿನಲ್ ಪಿತೂರಿ ಮತ್ತು ವಂಚನೆಗೆ ಸಂಬಂಧಿಸಿದಂತೆ ಆರೋಪಿಸಿದ್ದರು. ಅಲ್ಲದೆ, ಅಲ್ಪಾವಧಿಯಲ್ಲಿಯೇ ರಿಯಾ ಅವರು ಸುಶಾಂತ್ ಅವರ ಖಾತೆಯಿಂದ 15 ಕೋಟಿ ರೂಪಾಯಿಗಳನ್ನು ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಟನ ತಂದೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಪ್ರಕರಣ ದಾಖಲಿಸಿದ್ದರು. ಪಾಟ್ನಾದಲ್ಲಿ ನಟ ಸುಶಾಂತ್ ಅವರ ತಂದೆ ನೀಡಿರುವ ದೂರನ್ನು ಆಧರಿಸಿ ನಟಿ ರಿಯಾ ಚಕ್ರವರ್ತಿ ವಿರುದ್ಧ 306 (ಆತ್ಮಹತ್ಯೆಗೆ ಪ್ರಚೋದನೆ), 341 (ತಪ್ಪಾದ ಸಂಯಮಕ್ಕಾಗಿ ಶಿಕ್ಷೆ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ), 380 (ವಾಸಿಸುವ ಮನೆಯಲ್ಲೇ ಕಳ್ಳತನ), 406 (ವಿಶ್ವಾಸಾರ್ಹ ಉಲ್ಲಂಘನೆ) ಮತ್ತು 420 (ಮೋಸ ಮತ್ತು ಅಪ್ರಾಮಾಣಿಕವಾಗಿ ಆಸ್ತಿಯ ವಿತರಣೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm