ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm