ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm