ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm