ಬ್ರೇಕಿಂಗ್ ನ್ಯೂಸ್
02-03-21 12:26 pm Mangalore Correspondent ಕ್ರೈಂ
ಪುತ್ತೂರು, ಮಾ.2 : ಪ್ರಕರಣ ಒಂದರಲ್ಲಿ ವಿಚಾರಣೆ ನಡೆಸುತ್ತಿದ್ದ ಮಹಿಳಾ ಠಾಣೆ ಎಸ್ಸೈ ಮೇಲೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸೋಮವಾರ ನಡೆದಿದ್ದು, ಹಲ್ಲೆ ನಡೆಸಿದ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.28ರಂದು ಸುನಿತಾ ಡಿಸೋಜಾ ಮತ್ತು ಬೇಬಿ ಡಿಸೋಜಾ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪರಸ್ಪರ ದೂರು ನೀಡಿದ್ದರು. ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಎರಡು ಕುಟುಂಬದ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ಮಾತಿನ ವಿಚಾರದಲ್ಲಿ ವಿರೋಧ ಬಂದು ತನ್ನ ಪತಿ ಲಾರೆನ್ಸ್ ಡಿಸೋಜ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಅಡ್ಡ ಬಂದಿದ್ದಾರೆ. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೇ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಬಳಿಕ ಎಸ್ಸೈ ಸೇಸಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಬಂಧಿಸಿದ್ದಾರೆ.
A Lady Sub-Inspector of puttur police station was assaulted by a couple when the SI went to stop them fighting. A case has been registered.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm