ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm