ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm