ಬ್ರೇಕಿಂಗ್ ನ್ಯೂಸ್
19-08-20 12:05 pm Hassan Reporter ಕ್ರೈಂ
ಹಾಸನ: ಪೊಲೀಸರೆಂದು ಹೇಳಿಕೊಂಡು ಬಂದ ತಂಡವೊಂದು ಮನೆ ಪರಿಶೀಲಿಸುವ ನೆಪದಲ್ಲಿ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲವಣ್ಣಗೌಡ ಎಂಬವರ ಮನೆಯಲ್ಲಿ ನಾಲ್ವರು ಪೊಲೀಸರು ಎಂದು ಹೇಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಾಲ್ವರು ಇನ್ನೋವಾ ಕಾರಿನಲ್ಲಿ ಲವಣ್ಣಗೌಡ ಮನೆಗೆ ಬಂದಿದ್ದಾರೆ. ನಾವು ಪೊಲೀಸ್, ನಿಮ್ಮ ತಮ್ಮ ಬೆಂಗಳೂರಿನಿಂದ ಕಳ್ಳತನ ಮಾಡಿಕೊಂಡು ಹಣ ತಂದಿದ್ದಾನೆ. ಹಣವನ್ನು ಎಲ್ಲಿ ಇಟ್ಟಿದ್ದಾನೆ ಕೊಡಿ ಎಂದು ಹೇಳಿ ಅವರ ಬಳಿಯಿದ್ದ ಫೈಲ್ನಿಂದ ಲವಣ್ಣಗೌಡನ ತಮ್ಮ ಕೃಷ್ಣೇಗೌಡನ ಫೋಟೋ ತೋರಿಸಿದ್ದಾರೆ.
ಈ ವೇಳೆ ಮನೆಯವರು ನನ್ನ ತಮ್ಮ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿಲ್ಲ. ಅವನು ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿರುವುದು ಎಂದು ಹೇಳಿದ್ದಾರೆ. ಕೊನೆಗೆ ನಾಲ್ವರು ಮನೆಯವರನ್ನೆಲ್ಲ ಹಾಲ್ನಲ್ಲಿ ಕೂರಿಸಿದ್ದಾರೆ. ನಂತರ ಹಾಲಿನಲ್ಲಿ ಬೀರು, ಸೋಫಾ ಎಲ್ಲ ಹುಡುಕಿದ್ದು, ಬೀರುವಿನ ಬಾಗಿಲನ್ನು ತೆಗೆದು ಅದರಲ್ಲಿದ್ದ 12 ಗ್ರಾಂ ಚಿನ್ನದ ಸರ, 8 ಗ್ರಾಂ ಚಿನ್ನದ ಒಂದು ಜೊತೆ ಓಲೆ, 5 ಗ್ರಾಂನ ಉಂಗುರ ಇವುಗಳನ್ನು ತೆಗೆದುಕೊಂಡಿದ್ದಾರೆ.
ಕೊನೆಗೆ ಹೋಗುವಾಗ ನಿಮ್ಮ ಮನೆಯವರೆಲ್ಲರೂ ನಾಳೆ ಬೆಳಗ್ಗೆ ಚನ್ನರಾಯ ಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ ಹೋಗಿದ್ದಾರೆ. ಇದನ್ನು ನಂಬಿ ಮನೆಯವರು ಪೊಲೀಸ್ ಠಾಣೆಗೆ ಹೋದಾಗ ಬಂದವರು ನಕಲಿ ಪೊಲೀಸರೆಂದು ಗೊತ್ತಾಗಿದೆ. ಈ ಘಟನೆ ಸಂಬಂಧ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm