ಬ್ರೇಕಿಂಗ್ ನ್ಯೂಸ್
05-03-21 11:40 am Headline Karnataka News Network ಕ್ರೈಂ
ಬೆಂಗಳೂರು, ಮಾರ್ಚ್ 05: ವಿದ್ಯಾರ್ಥಿ ವೀಸಾ ಹೆಸರಿನಲ್ಲಿ ಬೆಂಗಳೂರಿಗೆ ಬಂದು ಪ್ರತಿಷ್ಠಿತರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯುಗೋಚಿಕೂ ವಿಕ್ಟರ್ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ಅರ್ಧ ಕೆ.ಜಿ. ಎಂಡಿಎಂಎ ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿ ವೀಸಾ ಮೇಲೆ ಬಂದಿದ್ದ ವಿಕ್ಟರ್, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ. ಮುಂಬಯಿನಲ್ಲಿರುವ ಪರಿಚಿತ ಮೈಕೇಲ್ ಎಂಬಾತನಿಂದ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಳ್ಳುತ್ತಿದ್ದ. ಇಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಸಂಪರ್ಕ ಬೆಳೆಸಿ ಅವರಿಗೆ ದುಬಾರಿ ಬೆಲೆಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದಲೂ ಇವನು ಡ್ರಗ್ ಡೀಲಿಂಗ್ ನಲ್ಲಿ ಶಾಮೀಲಾಗಿದ್ದ.
ಈತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಈ ಜಾಲದಲ್ಲಿ ಸಿಲುಕಿರುವ ಇತರೆ ಪೆಡ್ಲರ್ಗಳಿಗಾಗಿ ಶೋಧ ನಡೆದಿದೆ. ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀ ಕಾಂತಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ವಿಕ್ಟರ್ ವಿಚಾರಣೆ ವೇಳೆ ಕೆಲವು ಪ್ರತಿಷ್ಠಿತ ವ್ಯಕ್ತಿಗಳು ಡ್ರಗ್ ಖರೀದಿ ಮಾಡಿರುವ ಮಾಹಿತಿ ಸಿಕ್ಕಿದ್ದು ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ವಿಕ್ಟರ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
Bangalore CCB police have arrested an African peddler involved in drug peddling and seized 500 kg of ganja worth Rs 40 lakh.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm