ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.


ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm