ಬ್ರೇಕಿಂಗ್ ನ್ಯೂಸ್
05-03-21 01:19 pm Mangalore Correspondent ಕ್ರೈಂ
ಮಂಗಳೂರು, ಮಾ.5 : ಗ್ರಾಹಕರ ಸೋಗಿನಲ್ಲಿ ಬಂದ ಖದೀಮನೊಬ್ಬ ನಗರದ ಜ್ಯುವೆಲ್ಲರಿ ಶಾಪ್ ನಿಂದ ಹಾಡಹಗಲೇ ಆಭರಣ ಕಳವುಗೈದು ಓಡಿದ್ದು ಜ್ಯುವೆಲ್ಲರಿ ಸಿಬಂದಿ ಮತ್ತು ಮಾಲಕರೇ ಆತನನ್ನು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರಿಗೆ ಸೇರಿದ ನಗರದ ರಥಬೀದಿಯಲ್ಲಿರುವ ಅರುಣ್ ಜಿ. ಶೇಟ್ ಜ್ಯುವೆಲ್ಲರಿ ಆ್ಯಂಡ್ ಡೈಮಂಡ್ ವರ್ಕ್ಸ್ ಶಾಪ್ ಗೆ ಗುರುವಾರ ಮಧ್ಯಾಹ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದಿದ್ದ ಖದೀಮ, ಆಭರಣವನ್ನು ಖರೀದಿಸುವಂತೆ ನಟಿಸಿದ್ದಾನೆ. ಮಾಲಕ ಅರುಣ್ ಜಿ.ಶೇಟ್ ಸ್ವತಃ ಆತನಿಗೆ ಆಭರಣ ತೋರಿಸುತ್ತಿದ್ದರು. ಆತ ಉಂಗುರ ಒಂದನ್ನು ಕೈಗೆ ಹಾಕಿ ನೋಡುತ್ತಲೇ, ಏಕಾಏಕಿ ಆಭರಣದೊಂದಿಗೆ ಹೊರಗೆ ಓಡಿದ್ದಾನೆ.


ಆತ ಓಡುತ್ತಿರುವುದನ್ನು ಗಮನಿಸಿದ ಜ್ಯುವೆಲ್ಲರಿ ಮಾಲಕ ಅರುಣ್ ಜಿ ಶೇಟ್ ಅವನನ್ನು ಬೆನ್ನಟಿದ್ದಾರೆ. ಸ್ವಲ್ಪ ದೂರ ಹೋಗುತ್ತಲೇ ಆತ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ಅಷ್ಟರಲ್ಲಾಗಲೇ ಸ್ಥಳದಲ್ಲಿದ್ದವರಿಗೆ ವಿಷಯ ತಿಳಿದಿದ್ದು, ಈ ಸಂದರ್ಭ ಅಲ್ಲಿ ಸಾಕಷ್ಟು ಜನರು ಜಮಾಯಿಸಿದ್ದಾರೆ. ಈ ಎಲ್ಲಾ ದೃಶ್ಯ ಜುವೆಲ್ಲರಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
Man steals a gold ring from local jewelry stores by acting as a customer in Mangalore was caught red-handed by public.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am