ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm