ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am