ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.
ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm