ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am