ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.
ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 07:58 pm
Mangalore Correspondent
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm