ಬ್ರೇಕಿಂಗ್ ನ್ಯೂಸ್
05-03-21 03:50 pm Mangalore Correspondent ಕ್ರೈಂ
ಮಂಗಳೂರು, ಮಾ.5: ನವಜಾತ ಶಿಶುಗಳನ್ನು ಮಾರಾಟ ಮಾಡಿ, ಹಣ ಸಂಗ್ರಹಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರಿನ ಎನ್ ಜಿಓ ಒಡನಾಡಿ ಸಂಸ್ಥೆಯ ಸಹಯೋಗದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಮೂಲ್ಕಿ ನಿವಾಸಿ ರಾಯನ್ ಎಂಬಾತನನ್ನು ಬಂಧಿಸಿದ್ದಾರೆ.

ವಿವಿಧ ಕಡೆಗಳಿಂದ ನವಜಾತ ಶಿಶುಗಳನ್ನು ಪಡೆದು ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು ಅನ್ನೋ ಅಂಶ ತನಿಖೆಯಲ್ಲಿ ಬಯಲಾಗಿದೆ. ಗಂಡು ಮಗುವನ್ನು ಮೂರು ಲಕ್ಷಕ್ಕೆ ಖರೀದಿಸಿ, ಆರು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಹೆಣ್ಣು ಮಗುವನ್ನು ಎರಡು ಲಕ್ಷಕ್ಕೆ ಪಡೆದು ನಾಲ್ಕು ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ರಾಯನ್ ಜೊತೆಗೆ ಕಾರ್ಕಳ ಮೂಲದ ಕವಿತಾ ಎಂಬ ಮಹಿಳೆ ಮಗು ಮಾರಾಟಕ್ಕೆ ಸಹಾಯ ಮಾಡಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ಕ್ರಿಸ್ತಿಯನ್ ಮಹಿಳೆಯೊಬ್ಬರಿಗೆ ಮಕ್ಕಳಿಲ್ಲದೇ ಇದ್ದು, ಮಗು ಪಡೆಯುವುದಕ್ಕಾಗಿ ನೆರೆಮನೆಯ ಕವಿತಾಳನ್ನು ಸಂಪರ್ಕಿಸಿದ್ದಾರೆ. ಕವಿತಾ, ಆರೋಪಿ ರಾಯನ್ ಮೂಲಕ ಸಂಪರ್ಕಿಸಿ, ಹಾಸನ ಜಿಲ್ಲೆಯಿಂದ ಮುದ್ದಾದ ಮಗುವನ್ನು ದೊರಕಿಸಿದ್ದಳು. ಹಾಸನ ಮೂಲದ ಮಗುವನ್ನು ಮಾರಾಟ ಮಾಡಿದ್ದ ಬಗ್ಗೆ ಮಾಹಿತಿ ಪಡೆದ ಒಡನಾಡಿ ಸಂಸ್ಥೆಯವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ.
ಹಣಕ್ಕಾಗಿ ಮಗುವನ್ನು ಅರಬ್ ದೇಶಗಳಿಗೂ ಮಾರಾಟ ಮಾಡಲಾಗುತ್ತಿತ್ತು ಅನ್ನೋದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ರಾಯನ್ ಮೂರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ, ಈ ಜಾಲದಲ್ಲಿ ಬೇರೆ ಯಾರೆಲ್ಲ ಇದ್ದಾರೆ ಅನ್ನೋದು ಪತ್ತೆಯಾಗಬೇಕು ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
The Mangalore city police have succeeded in arresting one person in connection with Baby Selling Racket. The accused was selling Boy babies for 6 lakhs and girls for four lakhs.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm