ಬ್ರೇಕಿಂಗ್ ನ್ಯೂಸ್
05-03-21 06:12 pm Mangalore Correspondent ಕ್ರೈಂ
ಮಂಗಳೂರು, ಮಾ.5: ಸರಕಾರಿ ಬಸ್ಸಿನ ಮುಂದೆ ಅಡ್ಡಾದಿಡ್ಡಿ ಸವಾರಿ ಮಾಡಿಕೊಂಡು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಬಸ್ ಚಾಲಕನಿಗೆ ಹಲ್ಲೆಗೈದು ಚೂರಿಯಿಂದ ತಿವಿಯಲು ಯತ್ನಿಸಿದ ಘಟನೆ ನಗರದ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಅಡ್ಯಾರ್ ಕಣ್ಣೂರಿನ ಸೈಫ್ (19) ಬಂಧಿತ. ಆರೋಪಿ ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಇದಾಗಿದ್ದು ಬೆಳಗ್ಗೆ 8.50 ರ ಸುಮಾರಿಗೆ ಬಸ್ ಕಣ್ಣೂರು ತಲುಪಿತ್ತು. ಈ ವೇಳೆ, ಸೈಫ್ ಬಸ್ ಮುಂಭಾಗದಲ್ಲಿ ಅಡ್ಡಾದಿಡ್ಡಿ ಚಲಿಸುತ್ತಾ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾನೆ. ಅಲ್ಲದೆ, ಪ್ರಶ್ನೆ ಮಾಡಿದ ಬಸ್ ಚಾಲಕ ರಾಜು ಗಜಕೋಶ ಅವರ ಮೇಲೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಚಾಲಕ ಪೊಲೀಸರಿಗೆ ದೂರು ನೀಡಿದ್ದ. ಬಸ್ಸಿಗೆ ತನ್ನ ಸ್ಕೂಟರ್ ಅಡ್ಡವಿಟ್ಟು ಬಸ್ ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಸ್ಕೂಟರ್ನಲ್ಲಿದ್ದ ಚಾಕು ತೋರಿಸಿ ಕೊಲೆ ಬೆದರಿ ಹಾಕಿ ತಿವಿಯಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲ್ಲಲು ಯತ್ನಿಸಿದ್ದಾನೆ ಎಂದು ರಾಜು ಗಜಕೋಶ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆಯತ್ನ ಸಹಿತ ಐದು ಪ್ರಕರಣ ದಾಖಲಿಸಲಾಗಿದೆ.
09-01-26 02:05 pm
Bangalore Correspondent
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 03:21 pm
Mangalore Correspondent
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm