ಬ್ರೇಕಿಂಗ್ ನ್ಯೂಸ್
05-03-21 06:12 pm Mangalore Correspondent ಕ್ರೈಂ
ಮಂಗಳೂರು, ಮಾ.5: ಸರಕಾರಿ ಬಸ್ಸಿನ ಮುಂದೆ ಅಡ್ಡಾದಿಡ್ಡಿ ಸವಾರಿ ಮಾಡಿಕೊಂಡು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಬಸ್ ಚಾಲಕನಿಗೆ ಹಲ್ಲೆಗೈದು ಚೂರಿಯಿಂದ ತಿವಿಯಲು ಯತ್ನಿಸಿದ ಘಟನೆ ನಗರದ ಪಡೀಲ್ ರೈಲ್ವೆ ಓವರ್ ಬ್ರಿಡ್ಜ್ ಬಳಿ ನಡೆದಿದೆ. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಅಡ್ಯಾರ್ ಕಣ್ಣೂರಿನ ಸೈಫ್ (19) ಬಂಧಿತ. ಆರೋಪಿ ಕೃತ್ಯಕ್ಕೆ ಬಳದಸಿದ್ದ ಸ್ಕೂಟರನ್ನು ವಶಪಡಿಸಲಾಗಿದೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಇದಾಗಿದ್ದು ಬೆಳಗ್ಗೆ 8.50 ರ ಸುಮಾರಿಗೆ ಬಸ್ ಕಣ್ಣೂರು ತಲುಪಿತ್ತು. ಈ ವೇಳೆ, ಸೈಫ್ ಬಸ್ ಮುಂಭಾಗದಲ್ಲಿ ಅಡ್ಡಾದಿಡ್ಡಿ ಚಲಿಸುತ್ತಾ ಬಸ್ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾನೆ. ಅಲ್ಲದೆ, ಪ್ರಶ್ನೆ ಮಾಡಿದ ಬಸ್ ಚಾಲಕ ರಾಜು ಗಜಕೋಶ ಅವರ ಮೇಲೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಚಾಲಕ ಪೊಲೀಸರಿಗೆ ದೂರು ನೀಡಿದ್ದ. ಬಸ್ಸಿಗೆ ತನ್ನ ಸ್ಕೂಟರ್ ಅಡ್ಡವಿಟ್ಟು ಬಸ್ ಚಾಲಕನಿಗೆ ಅವಾಚ್ಯ ಶಬ್ದದಿಂದ ನಿಂದಿಸಿ ಸ್ಕೂಟರ್ನಲ್ಲಿದ್ದ ಚಾಕು ತೋರಿಸಿ ಕೊಲೆ ಬೆದರಿ ಹಾಕಿ ತಿವಿಯಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಕೊಲ್ಲಲು ಯತ್ನಿಸಿದ್ದಾನೆ ಎಂದು ರಾಜು ಗಜಕೋಶ ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೊಲೆಯತ್ನ ಸಹಿತ ಐದು ಪ್ರಕರಣ ದಾಖಲಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am