ಬ್ರೇಕಿಂಗ್ ನ್ಯೂಸ್
06-03-21 11:09 am Mangalore Correspondent ಕ್ರೈಂ
ಬಂಟ್ವಾಳ, ಮಾ.6: ಹೆಂಡತಿಯೇ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆ ಆರೋಪದಡಿ ಸೇಸಪ್ಪ ಅವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಕೂಲಿ ಕೆಲಸ ಮಾಡುತ್ತಿದ್ದು ದಿನಾ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಇವರ ಮನೆಯಲ್ಲಿ ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದ್ದು ಹೆಂಡತಿ ಮನೆಯಲ್ಲಿ ಇದ್ದ ಕತ್ತಿಯಿಂದ ಗಂಡನಿಗೆ ಹೊಡೆದಿದ್ದರು. ಇದರಿಂದ ಸೇಸಪ್ಪ ಅವರ ಬಲ ಹಣೆಗೆ ಗಾಯವಾಗಿದ್ದು ಮಗಳು ಇವರ ಜಗಳ ಬಿಡಿಸಿದ್ದಳು. ಬಳಿಕ ಗಾಯವಾಗಿ ರಕ್ತ ಬಂದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದಿದ್ದರು. ರಕ್ತಸ್ರಾವ ಆಗಿದ್ದರಿಂದ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಇದ್ದು ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ.
ಕೊಲೆ ಮಾಡಿದ್ದಾರೆ ಎಂಬ ಆರೋಪದಡಿ ಉಮಾವತಿ ಅವರನ್ನು ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ಚಾಳ ಗ್ರಾಮಾಂತರ ಎಸ್ಐ ಪ್ರಸನ್ನ ಅವರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
The wife kills her husband in an angry mood and under the influence of liquor in Bantwal, Mangalore. The deceased has been identified as Sesappa Poojary (60).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am